ಮೈಸೂರು: ಮೈಸೂರಿನಲ್ಲಿ ಶುಂಠಿ ಬೆಳೆಗಾರರಿಗೆ ಹೊಸ ಸಮಸ್ಯೆಯೊಂದು ಎದುರಾಗಿದೆ.
ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅನ್ನದಾತರು ಶುಂಠಿ ಬೆಳೆ ಬೆಳೆದಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಶುಂಠಿಗೆ ಕೊಳೆರೋಗ ಕಾಣಿಸಿಕೊಂಡಿದೆ.
ಇದರ ಜೊತೆಗೆ ಈ ಬಾರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯತೇಚ್ಛವಾಗಿ ಶುಂಠಿ ಬೆಳೆಯಲಾಗಿದ್ದು, ಇಳುವರಿ ಕೂಡ ತೀವ್ರ ಕಡಿಮೆಯಾಗಿದೆ. ಈ ಬೆನ್ನಲ್ಲೇ ಶುಂಠಿ ಬೆಳೆಗೂ ಬೆಲೆಯೂ ಕೂಡ ಇಳಿಕೆಯಾಗಿದೆ.
ಬೇರೆ ಬೆಳೆಗಳಿಗೆ ಹೋಲಿಸಿದರೆ ಶುಂಠಿ ಬೆಳೆ ಬೆಳೆಯಲು ಕೀಟನಾಶಕ ಹಾಗೂ ಗೊಬ್ಬರಕ್ಕೆಂದೇ ಲಕ್ಷಾಂತರ ರೂಪಾಯಿ ಖರ್ಚಾಗುತ್ತಿದೆ. ಹೀಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ರೂ, ಶುಂಠಿಯಿಂದ ಅಧಿಕ ಲಾಭವಿದೆ ಎಂದು ರೈತರೆಲ್ಲಾ ಶುಂಠಿ ಬೆಳೆ ಬೆಳೆದಿದ್ದಾರೆ.
ಆದರೆ ವರುಣ ಈ ಬಾರಿ ಶುಂಠಿ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದ್ದಾನೆ. ಇದರ ಜೊತೆಗೆ ಕೆಲ ಭಾಗದಲ್ಲಿ ಶುಂಠಿ ಬೆಳೆ ಇಳುವರಿ ಜಾಸ್ತಿ ಕೊಟ್ಟಿದ್ದು, ರೈತರು ಕೂಡ ತುಂಬಾ ಖುಷಿಯಲ್ಲಿದ್ದರು.
ಈಗ ಶುಂಠಿ ಬೆಲೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ ಕಂಗಾಲಾಗಿದ್ದು, ಮುಂದಿನ ದಿನಗಳಲ್ಲಾದರೂ ಬೆಳೆಗೆ ಸೂಕ್ತ ಬೆಲೆ ಸಿಗುತ್ತದೆ ಎಂದು ಎದುರು ನೋಡುತ್ತಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…