ಮೈಸೂರು: ಮೈಸೂರಿನಲ್ಲಿ ಶುಂಠಿ ಬೆಳೆಗಾರರಿಗೆ ಹೊಸ ಸಮಸ್ಯೆಯೊಂದು ಎದುರಾಗಿದೆ.
ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅನ್ನದಾತರು ಶುಂಠಿ ಬೆಳೆ ಬೆಳೆದಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಶುಂಠಿಗೆ ಕೊಳೆರೋಗ ಕಾಣಿಸಿಕೊಂಡಿದೆ.
ಇದರ ಜೊತೆಗೆ ಈ ಬಾರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯತೇಚ್ಛವಾಗಿ ಶುಂಠಿ ಬೆಳೆಯಲಾಗಿದ್ದು, ಇಳುವರಿ ಕೂಡ ತೀವ್ರ ಕಡಿಮೆಯಾಗಿದೆ. ಈ ಬೆನ್ನಲ್ಲೇ ಶುಂಠಿ ಬೆಳೆಗೂ ಬೆಲೆಯೂ ಕೂಡ ಇಳಿಕೆಯಾಗಿದೆ.
ಬೇರೆ ಬೆಳೆಗಳಿಗೆ ಹೋಲಿಸಿದರೆ ಶುಂಠಿ ಬೆಳೆ ಬೆಳೆಯಲು ಕೀಟನಾಶಕ ಹಾಗೂ ಗೊಬ್ಬರಕ್ಕೆಂದೇ ಲಕ್ಷಾಂತರ ರೂಪಾಯಿ ಖರ್ಚಾಗುತ್ತಿದೆ. ಹೀಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ರೂ, ಶುಂಠಿಯಿಂದ ಅಧಿಕ ಲಾಭವಿದೆ ಎಂದು ರೈತರೆಲ್ಲಾ ಶುಂಠಿ ಬೆಳೆ ಬೆಳೆದಿದ್ದಾರೆ.
ಆದರೆ ವರುಣ ಈ ಬಾರಿ ಶುಂಠಿ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದ್ದಾನೆ. ಇದರ ಜೊತೆಗೆ ಕೆಲ ಭಾಗದಲ್ಲಿ ಶುಂಠಿ ಬೆಳೆ ಇಳುವರಿ ಜಾಸ್ತಿ ಕೊಟ್ಟಿದ್ದು, ರೈತರು ಕೂಡ ತುಂಬಾ ಖುಷಿಯಲ್ಲಿದ್ದರು.
ಈಗ ಶುಂಠಿ ಬೆಲೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ ಕಂಗಾಲಾಗಿದ್ದು, ಮುಂದಿನ ದಿನಗಳಲ್ಲಾದರೂ ಬೆಳೆಗೆ ಸೂಕ್ತ ಬೆಲೆ ಸಿಗುತ್ತದೆ ಎಂದು ಎದುರು ನೋಡುತ್ತಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…