ಮೈಸೂರು: ಮೈಸೂರಿನಲ್ಲಿ ಶುಂಠಿ ಬೆಳೆಗಾರರಿಗೆ ಹೊಸ ಸಮಸ್ಯೆಯೊಂದು ಎದುರಾಗಿದೆ.
ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅನ್ನದಾತರು ಶುಂಠಿ ಬೆಳೆ ಬೆಳೆದಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಶುಂಠಿಗೆ ಕೊಳೆರೋಗ ಕಾಣಿಸಿಕೊಂಡಿದೆ.
ಇದರ ಜೊತೆಗೆ ಈ ಬಾರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯತೇಚ್ಛವಾಗಿ ಶುಂಠಿ ಬೆಳೆಯಲಾಗಿದ್ದು, ಇಳುವರಿ ಕೂಡ ತೀವ್ರ ಕಡಿಮೆಯಾಗಿದೆ. ಈ ಬೆನ್ನಲ್ಲೇ ಶುಂಠಿ ಬೆಳೆಗೂ ಬೆಲೆಯೂ ಕೂಡ ಇಳಿಕೆಯಾಗಿದೆ.
ಬೇರೆ ಬೆಳೆಗಳಿಗೆ ಹೋಲಿಸಿದರೆ ಶುಂಠಿ ಬೆಳೆ ಬೆಳೆಯಲು ಕೀಟನಾಶಕ ಹಾಗೂ ಗೊಬ್ಬರಕ್ಕೆಂದೇ ಲಕ್ಷಾಂತರ ರೂಪಾಯಿ ಖರ್ಚಾಗುತ್ತಿದೆ. ಹೀಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ರೂ, ಶುಂಠಿಯಿಂದ ಅಧಿಕ ಲಾಭವಿದೆ ಎಂದು ರೈತರೆಲ್ಲಾ ಶುಂಠಿ ಬೆಳೆ ಬೆಳೆದಿದ್ದಾರೆ.
ಆದರೆ ವರುಣ ಈ ಬಾರಿ ಶುಂಠಿ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದ್ದಾನೆ. ಇದರ ಜೊತೆಗೆ ಕೆಲ ಭಾಗದಲ್ಲಿ ಶುಂಠಿ ಬೆಳೆ ಇಳುವರಿ ಜಾಸ್ತಿ ಕೊಟ್ಟಿದ್ದು, ರೈತರು ಕೂಡ ತುಂಬಾ ಖುಷಿಯಲ್ಲಿದ್ದರು.
ಈಗ ಶುಂಠಿ ಬೆಲೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ ಕಂಗಾಲಾಗಿದ್ದು, ಮುಂದಿನ ದಿನಗಳಲ್ಲಾದರೂ ಬೆಳೆಗೆ ಸೂಕ್ತ ಬೆಲೆ ಸಿಗುತ್ತದೆ ಎಂದು ಎದುರು ನೋಡುತ್ತಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…