ಮೈಸೂರು

ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ : ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಮೈಸೂರು : ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಆತನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಅಲೆಮಾರಿ ಸಮುದಾಯದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಆರೋಪಿಯನ್ನು ಮೈಸೂರಿನ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದೆ.

ಹೊಟ್ಟೆಪಾಡಿಗಾಗಿ ಬಲೂನ್ ವ್ಯಾಪಾರಕ್ಕಾಗಿ ಮೈಸೂರು ದಸರಾಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ತಂಗಿದ್ದವು. ಈತ ರಾತ್ರಿ ಟೆಂಟ್‌ನಲ್ಲಿ ಮಲಗಿದ್ದ 10 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದ ಮೇಲೆ ಹಂತಕ ಕಾರ್ತಿಕನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕೃತ್ಯ ಎಸಗಿ ಮೈಸೂರು ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಪರಾರಿಯಾಗಿದ್ದ. ಮೇಟಗಳ್ಳಿ ಬಳಿ ಪೊಲೀಸರು ಆತನನ್ನು ಹಿಡಿಯಲು ಮುಂದಾದಾಗ ಕಾನ್ಸ್‌ಟೇಬಲ್ ವೆಂಕಟೇಶ್‌ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಸಿದ್ದಾನೆ. ಈ ವೇಳೆ ಸಬ್ ಇನ್ಸ್‌ಪೆಕ್ಟರ್‌ ಜೈಕೀರ್ತಿ ಅವರು ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ. ಆರೋಪಿ ಕಾರ್ತಿಕ್‌ ನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಇದನ್ನು ಓದಿ : ಮೈಸೂರು | ಬಾಲಕಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ; ಆರೋಪಿ ಗುರುತು ಪತ್ತೆ

ಮೈಸೂರಿನ ಸಿದ್ದಲಿಂಗಪುರ ನಿವಾಸಿಯಾಗಿರುವ ಕಾರ್ತಿಕ್, ಮಂಡ್ಯದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ. ಆ ಪ್ರಕರಣದಲ್ಲಿ 2 ವರ್ಷ ಜೈಲಿನಲ್ಲಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆದಾಡುತ್ತಿದ್ದ. ಮದ್ಯ ವ್ಯಸನಿ ಕಾರ್ತಿಕ್ ಕಣ್ಣಿಗೆ 10 ವರ್ಷದ ಬಾಲಕಿ ಬಿದ್ದಿದ್ದು, ಆಕೆಯನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ.

ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50 ಕ್ಕೂ ಹೆಚ್ಚು ಕುಟುಂಬ ಬಂದಿವೆ. ಇವರು ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದರು. ಆದ್ರೆ, ಹಿಂದಿನ ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಆದ್ರೆ, ಬೆಳಗ್ಗೆ ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆಯ ಶಂಕೆ ವ್ಯಕ್ತಪಡಿಸಿದ್ದರು. ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡಿದ ಬಳಿಕ ಕಾರ್ತಿಕ್ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago