ಮೈಸೂರು

ದೇಶದ ಅಭಿವೃದ್ಧಿ ಗ್ಯಾರಂಟಿಗೆ ಮತ ನೀಡಿ: ಎಂ ಲಕ್ಷ್ಮಣ್‌

ಮೈಸೂರು: ರಾಜ್ಯ ಕಾಂಗ್ರೆಸ್‌ನ ಗ್ಯಾರಂಟಿಯಷ್ಟೆ ನಿಮ್ಮ ಸೇವಕನಾಗಿ ಕೆಲಸ ಮಾಡಿಕೊಡುತ್ತೇನೆ, ನನಗೊಂದು ಅವಕಾಶ ಕೊಡಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಮನವಿ ಮಾಡಿದರು.

ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿ, ಸಿದ್ದಲಿಂಗಪುರ, ಕೆ.ಆರ್.ಮಿಲ್ ಕಾಲೋನಿ, ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯಾ, ಆಲನಹಳ್ಳಿ ಹಾಗೂ ಹೊಸುಂಡಿ ಗ್ರಾಮಗಳಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಜತೆಗೂಡಿ ಮತಯಾಚನೆ ಮಾಡಿದರು.

ಬಳಿಕ ಮಾತನಾಡಿ, ಜನಪರ ಯೋಜನೆಗಳನ್ನು ನೀಡುವ ವ್ಯವಸ್ಥೆ ಇರುವುದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ರಾಜ್ಯದಲ್ಲಿ ಬರಗಾಲ ಇದ್ದರೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಯಾಪೈಸೆ ಕೊಡಲಿಲ್ಲ. ಸೆಪ್ಟಂಬರ್‌ನಲ್ಲೇ ವರದಿ ಕೊಟ್ಟು ಮನವಿ ಮಾಡಿದರೂ ಸ್ಪಂದನೆ ಮಾಡಲಿಲ್ಲ. ಅವರು ಪುಕ್ಕಟ್ಟೆ ಕೊಡದಿದ್ದರೂ ನಮ್ಮ ರಾಜ್ಯದ ತೆರಿಗೆ ಹಣದಲ್ಲಿ ನ್ಯಾಯಯುತವಾಗಿ ನೀಡಬೇಕಾದ ಅನುದಾನ ನೀಡಲಿಲ್ಲ. ಬರೀ ಸುಳ್ಳು ಹೇಳಿಕೊಂಡೆ ತಿರುಗಾಡುವ ಕೆಲಸ ಮಾಡುತ್ತಾರೆ. ಆದುದರಿಂದ ಜನತೆ ಅರ್ಥ ಮಾಡಿಕೊಳ್ಳಬೇಕಿದೆ, ನಿಮ್ಮ ಮತ ಸುಳ್ಳು ಹೇಳುವವರ ವಿರುದ್ಧವಿರಬೇಕು. ಸದಾ ಜನಸೇವೆಯನ್ನೇ ಮಾಡುತ್ತಾ ಬಂದಿರುವ ಕಾಂಗ್ರೆಸ್‌ಗೆ ಮತ ನೀಡಿ ಎಂದು ಮನವಿ ಮಾಡಿದರು.

ಪ್ರತಾಪ್ ಸಿಂಹ ಮಾಧ್ಯಮಗಳ ಮುಂದೆ ಬಂದೂ ಕೋಮುವಾದದ ಮಾತುಗಳನಷ್ಟೇ ಆಡಿದ್ದು ಬಿಟ್ಟರೆ ಬೇರೆ ಎನೂ ಮಾಡಿಲ್ಲ. ಆದರೆ, ನಾನು ನಿಮಗೆ ಭರವಸೆ ನೀಡುತ್ತೇನೆ. ನನಗೆ ನೀವು ಹಾಕುವ ಮತಕ್ಕೆ ಐದು ವರ್ಷವೂ ನಿಮ್ಮ ಸೇವಕನಾಗಿ ನಿಮ್ಮ ಕೆಲಸ ಮಾಡುತ್ತೇನೆ. ದಯಾಮಾಡಿ ಒಂದು ಅವಕಾಶ ಕೊಡಿ ಎಂದು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.

22 ಸಾವಿರ ಕೋಟಿ ರೂ.ಗಳನ್ನು ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಮೈಸೂರು ಜಿಲ್ಲೆಗೆ ನೀಡಿದ್ದಾರೆ. ಜಿಲ್ಲೆಯ ಉತ್ತಮ ರಸ್ತೆಗಳಿಗೆ ಎಚ್.ಸಿ.ಮಹದೇವಪ್ಪ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಕೊಡುಗೆಯೇ ಕಾರಣವಾಗಿದೆ ಎಂದರು.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

40 mins ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

1 hour ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

1 hour ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

6 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

10 hours ago