ಮೈಸೂರು

ನನ್ನ ರುಣವನ್ನು ತೀರಿಸಲಿಕ್ಕೆ ಒಂದು ಅವಕಾಶ ನೀಡಿ : ಯದುವೀರ್‌ ಒಡೆಯರ್‌

ಮೈಸೂರು : ನಮ್ಮ ವಂಶದ ಹಿರಿಯರ ರುಣ ತೀರಿಸಲಿಕ್ಕೆ ನಾನನಗೆ ಅವಕಾಶ ನೀಡಿ ಎಂದು ಕೇಳುತ್ತಿಲ್ಲ. ನನ್ನ ರುಣವನ್ನು ತೀರಿಸಲಿಕ್ಕೆ ಒಂದು ಅವಕಾಶ  ನೀಡಿ ಎಂದು ಕೇಳುತ್ತಿದ್ದೇನೆ ಎಂದು ಮೈಸೂರು-ಕೊಡಗು ಮೈತ್ರಿ ಅಭ್ಯರ್ಥಿ ಯದುವೀರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ದತ್ತು ಸ್ವೀಕಾರದಿಂದ ಇಂದಿನ ವರೆಗೆ 9 ವರ್ಷಗಳ ಕಾಲ ನನಗೆ ನೀಡಿದ ಪ್ರೀತಿ ಹಾಗೂ ಬೆಂಬಲದ ರುಣವನ್ನು ತೀರಿಸಲು ನನಗೆ ಒಂದು ಅವಕಾಶ ನೀಡಿ ಎಂದು ಅವರು ತಿಳಿಸಿದರು.

ಅನೇಕರು,  ಹಿಂದೆ ಮೈಸೂರು ಅರಸರು ಮಾಡಿದ ಕೆಲಸಕ್ಕಾಗಿ ನಿಮ್ಮ ರುಣ ತೀರಿಸಲು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿದಿದ್ದಾರೆ. ಆ ರೀತಿ ಯಾವುದೇ ಉದ್ದೇಶ ಇಲ್ಲ. ಅಂದಿನ ಕಾಲದಲ್ಲಿ ಮಹಾರಾಜರು ತಮ್ಮ ರಾಜ ಧರ್ಮಕ್ಕೆ ಅನುಗುಣವಾಗಿ ಅವರ ಸೇವೆ ಮಾಡಿದ್ದಾರೆ. ಆದರೇ ನನ್ನ ದತ್ತು ಸ್ವೀಕಾರದ ಬಳಿಕ ಒಂಬತ್ತು ವರ್ಷಗಳ ಕಾಲ ನಿಮಗೆ ನಾನು ಚಿರರುಣಿಯಾಗಿದ್ದೇನೆ. ಆ ರುಣವನ್ನು ನಾನು ತೀರಿಸಲಿಕ್ಕೆ ನನಗೆ ಒಂದು ಅವಕಾಶ ನೀಡಿ ಎಂದು ಮನವಿ ಮಾಡಿದರು.

ವಿಕಸಿತ ಭಾರತಕ್ಕಾಗಿ ನಾವೆಲ್ಲರೂ ಕೆಲಸ ಮಾಡಬೇಕು : ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳು ದೇಶದ ಪ್ರಗತಿಗಾಗಿ ಮಾಡುತ್ತಿರುವ ಕೆಲಸ. ಅವರ ದೂರದೃಷ್ಠಿಯನ್ನು ನೋಡುತ್ತಿದ್ದರೆ ನಮ್ಮ ಮುಂದೆ ಇರುವ ಸಂಕಷ್ಟಗಳು ಸಣ್ಣದಾಗಿ ಕಾಣಿಸುತ್ತದೆ.

ಪ್ರಧಾನಮಂತ್ರಿಗಳ 2047ರ ವಿಕಸಿತ ಭಾರತದ ಮೇಲೆ ಇಟ್ಟಿರುವ ಕನಸಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಕಳೆದ ಹತ್ತು ವರ್ಷ ಅವರು ಮಾಡಿರುವ ಕೆಲಸವೇ ನಮಗೆಲ್ಲಾ ಸ್ಪೂರ್ತಿ ಎಂದು ಹೇಳಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

2 mins ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

7 mins ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

12 mins ago

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…

16 mins ago

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

2 hours ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

2 hours ago