ಮೈಸೂರು : ನಮ್ಮ ವಂಶದ ಹಿರಿಯರ ರುಣ ತೀರಿಸಲಿಕ್ಕೆ ನಾನನಗೆ ಅವಕಾಶ ನೀಡಿ ಎಂದು ಕೇಳುತ್ತಿಲ್ಲ. ನನ್ನ ರುಣವನ್ನು ತೀರಿಸಲಿಕ್ಕೆ ಒಂದು ಅವಕಾಶ ನೀಡಿ ಎಂದು ಕೇಳುತ್ತಿದ್ದೇನೆ ಎಂದು ಮೈಸೂರು-ಕೊಡಗು ಮೈತ್ರಿ ಅಭ್ಯರ್ಥಿ ಯದುವೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ದತ್ತು ಸ್ವೀಕಾರದಿಂದ ಇಂದಿನ ವರೆಗೆ 9 ವರ್ಷಗಳ ಕಾಲ ನನಗೆ ನೀಡಿದ ಪ್ರೀತಿ ಹಾಗೂ ಬೆಂಬಲದ ರುಣವನ್ನು ತೀರಿಸಲು ನನಗೆ ಒಂದು ಅವಕಾಶ ನೀಡಿ ಎಂದು ಅವರು ತಿಳಿಸಿದರು.
ಅನೇಕರು, ಹಿಂದೆ ಮೈಸೂರು ಅರಸರು ಮಾಡಿದ ಕೆಲಸಕ್ಕಾಗಿ ನಿಮ್ಮ ರುಣ ತೀರಿಸಲು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿದಿದ್ದಾರೆ. ಆ ರೀತಿ ಯಾವುದೇ ಉದ್ದೇಶ ಇಲ್ಲ. ಅಂದಿನ ಕಾಲದಲ್ಲಿ ಮಹಾರಾಜರು ತಮ್ಮ ರಾಜ ಧರ್ಮಕ್ಕೆ ಅನುಗುಣವಾಗಿ ಅವರ ಸೇವೆ ಮಾಡಿದ್ದಾರೆ. ಆದರೇ ನನ್ನ ದತ್ತು ಸ್ವೀಕಾರದ ಬಳಿಕ ಒಂಬತ್ತು ವರ್ಷಗಳ ಕಾಲ ನಿಮಗೆ ನಾನು ಚಿರರುಣಿಯಾಗಿದ್ದೇನೆ. ಆ ರುಣವನ್ನು ನಾನು ತೀರಿಸಲಿಕ್ಕೆ ನನಗೆ ಒಂದು ಅವಕಾಶ ನೀಡಿ ಎಂದು ಮನವಿ ಮಾಡಿದರು.
ವಿಕಸಿತ ಭಾರತಕ್ಕಾಗಿ ನಾವೆಲ್ಲರೂ ಕೆಲಸ ಮಾಡಬೇಕು : ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳು ದೇಶದ ಪ್ರಗತಿಗಾಗಿ ಮಾಡುತ್ತಿರುವ ಕೆಲಸ. ಅವರ ದೂರದೃಷ್ಠಿಯನ್ನು ನೋಡುತ್ತಿದ್ದರೆ ನಮ್ಮ ಮುಂದೆ ಇರುವ ಸಂಕಷ್ಟಗಳು ಸಣ್ಣದಾಗಿ ಕಾಣಿಸುತ್ತದೆ.
ಪ್ರಧಾನಮಂತ್ರಿಗಳ 2047ರ ವಿಕಸಿತ ಭಾರತದ ಮೇಲೆ ಇಟ್ಟಿರುವ ಕನಸಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಕಳೆದ ಹತ್ತು ವರ್ಷ ಅವರು ಮಾಡಿರುವ ಕೆಲಸವೇ ನಮಗೆಲ್ಲಾ ಸ್ಪೂರ್ತಿ ಎಂದು ಹೇಳಿದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…