ಮೈಸೂರು : ನಮ್ಮ ವಂಶದ ಹಿರಿಯರ ರುಣ ತೀರಿಸಲಿಕ್ಕೆ ನಾನನಗೆ ಅವಕಾಶ ನೀಡಿ ಎಂದು ಕೇಳುತ್ತಿಲ್ಲ. ನನ್ನ ರುಣವನ್ನು ತೀರಿಸಲಿಕ್ಕೆ ಒಂದು ಅವಕಾಶ ನೀಡಿ ಎಂದು ಕೇಳುತ್ತಿದ್ದೇನೆ ಎಂದು ಮೈಸೂರು-ಕೊಡಗು ಮೈತ್ರಿ ಅಭ್ಯರ್ಥಿ ಯದುವೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ದತ್ತು ಸ್ವೀಕಾರದಿಂದ ಇಂದಿನ ವರೆಗೆ 9 ವರ್ಷಗಳ ಕಾಲ ನನಗೆ ನೀಡಿದ ಪ್ರೀತಿ ಹಾಗೂ ಬೆಂಬಲದ ರುಣವನ್ನು ತೀರಿಸಲು ನನಗೆ ಒಂದು ಅವಕಾಶ ನೀಡಿ ಎಂದು ಅವರು ತಿಳಿಸಿದರು.
ಅನೇಕರು, ಹಿಂದೆ ಮೈಸೂರು ಅರಸರು ಮಾಡಿದ ಕೆಲಸಕ್ಕಾಗಿ ನಿಮ್ಮ ರುಣ ತೀರಿಸಲು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿದಿದ್ದಾರೆ. ಆ ರೀತಿ ಯಾವುದೇ ಉದ್ದೇಶ ಇಲ್ಲ. ಅಂದಿನ ಕಾಲದಲ್ಲಿ ಮಹಾರಾಜರು ತಮ್ಮ ರಾಜ ಧರ್ಮಕ್ಕೆ ಅನುಗುಣವಾಗಿ ಅವರ ಸೇವೆ ಮಾಡಿದ್ದಾರೆ. ಆದರೇ ನನ್ನ ದತ್ತು ಸ್ವೀಕಾರದ ಬಳಿಕ ಒಂಬತ್ತು ವರ್ಷಗಳ ಕಾಲ ನಿಮಗೆ ನಾನು ಚಿರರುಣಿಯಾಗಿದ್ದೇನೆ. ಆ ರುಣವನ್ನು ನಾನು ತೀರಿಸಲಿಕ್ಕೆ ನನಗೆ ಒಂದು ಅವಕಾಶ ನೀಡಿ ಎಂದು ಮನವಿ ಮಾಡಿದರು.
ವಿಕಸಿತ ಭಾರತಕ್ಕಾಗಿ ನಾವೆಲ್ಲರೂ ಕೆಲಸ ಮಾಡಬೇಕು : ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳು ದೇಶದ ಪ್ರಗತಿಗಾಗಿ ಮಾಡುತ್ತಿರುವ ಕೆಲಸ. ಅವರ ದೂರದೃಷ್ಠಿಯನ್ನು ನೋಡುತ್ತಿದ್ದರೆ ನಮ್ಮ ಮುಂದೆ ಇರುವ ಸಂಕಷ್ಟಗಳು ಸಣ್ಣದಾಗಿ ಕಾಣಿಸುತ್ತದೆ.
ಪ್ರಧಾನಮಂತ್ರಿಗಳ 2047ರ ವಿಕಸಿತ ಭಾರತದ ಮೇಲೆ ಇಟ್ಟಿರುವ ಕನಸಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಕಳೆದ ಹತ್ತು ವರ್ಷ ಅವರು ಮಾಡಿರುವ ಕೆಲಸವೇ ನಮಗೆಲ್ಲಾ ಸ್ಪೂರ್ತಿ ಎಂದು ಹೇಳಿದರು.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…