ಮೈಸೂರು

ನನ್ನ ರುಣವನ್ನು ತೀರಿಸಲಿಕ್ಕೆ ಒಂದು ಅವಕಾಶ ನೀಡಿ : ಯದುವೀರ್‌ ಒಡೆಯರ್‌

ಮೈಸೂರು : ನಮ್ಮ ವಂಶದ ಹಿರಿಯರ ರುಣ ತೀರಿಸಲಿಕ್ಕೆ ನಾನನಗೆ ಅವಕಾಶ ನೀಡಿ ಎಂದು ಕೇಳುತ್ತಿಲ್ಲ. ನನ್ನ ರುಣವನ್ನು ತೀರಿಸಲಿಕ್ಕೆ ಒಂದು ಅವಕಾಶ  ನೀಡಿ ಎಂದು ಕೇಳುತ್ತಿದ್ದೇನೆ ಎಂದು ಮೈಸೂರು-ಕೊಡಗು ಮೈತ್ರಿ ಅಭ್ಯರ್ಥಿ ಯದುವೀರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ದತ್ತು ಸ್ವೀಕಾರದಿಂದ ಇಂದಿನ ವರೆಗೆ 9 ವರ್ಷಗಳ ಕಾಲ ನನಗೆ ನೀಡಿದ ಪ್ರೀತಿ ಹಾಗೂ ಬೆಂಬಲದ ರುಣವನ್ನು ತೀರಿಸಲು ನನಗೆ ಒಂದು ಅವಕಾಶ ನೀಡಿ ಎಂದು ಅವರು ತಿಳಿಸಿದರು.

ಅನೇಕರು,  ಹಿಂದೆ ಮೈಸೂರು ಅರಸರು ಮಾಡಿದ ಕೆಲಸಕ್ಕಾಗಿ ನಿಮ್ಮ ರುಣ ತೀರಿಸಲು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿದಿದ್ದಾರೆ. ಆ ರೀತಿ ಯಾವುದೇ ಉದ್ದೇಶ ಇಲ್ಲ. ಅಂದಿನ ಕಾಲದಲ್ಲಿ ಮಹಾರಾಜರು ತಮ್ಮ ರಾಜ ಧರ್ಮಕ್ಕೆ ಅನುಗುಣವಾಗಿ ಅವರ ಸೇವೆ ಮಾಡಿದ್ದಾರೆ. ಆದರೇ ನನ್ನ ದತ್ತು ಸ್ವೀಕಾರದ ಬಳಿಕ ಒಂಬತ್ತು ವರ್ಷಗಳ ಕಾಲ ನಿಮಗೆ ನಾನು ಚಿರರುಣಿಯಾಗಿದ್ದೇನೆ. ಆ ರುಣವನ್ನು ನಾನು ತೀರಿಸಲಿಕ್ಕೆ ನನಗೆ ಒಂದು ಅವಕಾಶ ನೀಡಿ ಎಂದು ಮನವಿ ಮಾಡಿದರು.

ವಿಕಸಿತ ಭಾರತಕ್ಕಾಗಿ ನಾವೆಲ್ಲರೂ ಕೆಲಸ ಮಾಡಬೇಕು : ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳು ದೇಶದ ಪ್ರಗತಿಗಾಗಿ ಮಾಡುತ್ತಿರುವ ಕೆಲಸ. ಅವರ ದೂರದೃಷ್ಠಿಯನ್ನು ನೋಡುತ್ತಿದ್ದರೆ ನಮ್ಮ ಮುಂದೆ ಇರುವ ಸಂಕಷ್ಟಗಳು ಸಣ್ಣದಾಗಿ ಕಾಣಿಸುತ್ತದೆ.

ಪ್ರಧಾನಮಂತ್ರಿಗಳ 2047ರ ವಿಕಸಿತ ಭಾರತದ ಮೇಲೆ ಇಟ್ಟಿರುವ ಕನಸಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಕಳೆದ ಹತ್ತು ವರ್ಷ ಅವರು ಮಾಡಿರುವ ಕೆಲಸವೇ ನಮಗೆಲ್ಲಾ ಸ್ಪೂರ್ತಿ ಎಂದು ಹೇಳಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

5 mins ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

13 mins ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

19 mins ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

48 mins ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

1 hour ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

2 hours ago