ಮೈಸೂರು: ಎಂಎಲ್ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ ರಕ್ತದಲ್ಲಿ ಸಹಿ ಹಾಕಿ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದಾರೆ.
ಮೈಸೂರಿನ ಬಸವಣ್ಣ ಎಂಬ ಕಾಂಗ್ರೆಸ್ ಕಾರ್ಯಕರ್ತನು, ಎಂಎಲ್ಸಿ ಸ್ಥಾನ ನೀಡುವಂತೆ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಮೈಸೂರು ರಾಮಸ್ವಾಮಿ ವೃತ್ತದಲ್ಲಿ ನಿಂತು, ರಕ್ತದ ಮೂಲಕ ಸಹಿ ಹಾಕಿದ ಅರ್ಜಿಯನ್ನು ಸಾರ್ವಜನಿಕವಾಗಿ ಪೋಸ್ಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಇದನ್ನು ಓದಿ: ಓದುಗರ ಪತ್ರ: ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ
ಈ ಹಿಂದೆ ಎರಡು ಬಾರಿ ಎಂಎಲ್ಸಿ ಸ್ಥಾನಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ. ಇದು ಮೂರನೇ ಬಾರಿ ಅರ್ಜಿ ಹಾಕುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಹೊಸ ವರ್ಷದಲ್ಲಿ ಎಂಎಲ್ಸಿ ಸ್ಥಾನ ಖಾಲಿಯಾಗಲಿದ್ದು, ಈ ಬಾರಿ ನನಗೆ ಅವಕಾಶ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ಬಸವಣ್ಣ ಹೇಳಿದ್ದಾರೆ.
ರಕ್ತದ ಮೂಲಕ ಸಹಿ ಹಾಕಿ ಬರೆದ ಅರ್ಜಿಯನ್ನು ರಾಹುಲ್ ಗಾಂಧಿ ಅವರೊಂದಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾರೆ.
ಪಕ್ಷಕ್ಕಾಗಿ ವರ್ಷಗಳಿಂದ ನಿಷ್ಠೆಯಿಂದ ದುಡಿಯುತ್ತಿದ್ದೇನೆ. ನೂರಕ್ಕೆ ನೂರು ಶೇಕಡಾ ಈ ಬಾರಿ ಎಂಎಲ್ಸಿ ಸ್ಥಾನ ಸಿಗುತ್ತದೆ
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…