ಮೈಸೂರು

ಸಮಾಜ ಸೇವಕ ಅಯೂಬ್ ಅಹ್ಮದ್ ರಿಗೆ ಪದ್ಮಶ್ರೀ ನೀಡಿ : ಮೊದಿಗೆ ಪತ್ರ ಬರೆದ ಪ್ರತಾಪ್ ಸಿಂಹ,‌ ತನ್ವೀರ್‌ ಸೇಠ್

ಮೈಸೂರು : ಕಳೆದ 22 ವರ್ಷಗಳಿಂದ ಸಾವಿರಾರು ಅನಾಥ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಮೈಸೂರಿನ ‘ಬಾಡಿ ಮಿಯಾನ್’ ಎಂದೇ ಹೆಸರುವಾಸಿಯಾಗಿರುವ ಮೈಸೂರಿನ ರಾಜೀವ್ ನಗರ ನಿವಾಸಿ ಅಯೂಬ್ ಅಹ್ಮದ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಸಂಸದ ಪ್ರತಾಪ್ ಸಿಂಹ ಹಾಗೂ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ಪ್ರಧಾನ ಮಂತ್ರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದಾರೆ.

ರಸ್ತೆಯಲ್ಲಿ, ಕೆರೆ ಅಥವಾ ಹೊಳೆಯಲ್ಲಿ ಸಾವಿಗೀಡಾಗಿ ಯಾರೂ ಮುಟ್ಟಲು ಹಿಂಜರಿಯುವಂತಹ ಮೃತದೇಹಗಳು ಸೇರಿದಂತೆ ಸಾವಿರಾರು ಅನಾಥ ಮೃತದೇಹಗಳನ್ನು ಅಯೂಬ್ ಅಹ್ಮದ್ ಧೈರ್ಯವಾಗಿ ಎತ್ತಿಕೊಂಡು ಹೋಗಿ ತನ್ನ ಸ್ವಂತ ಹಣದಲ್ಲೇ ಅಂತ್ಯಸಂಸ್ಕಾರ ಮಾಡುತ್ತಾರೆ. ಯಾವುದೇ ಜಾತಿ, ಧರ್ಮ ಎನ್ನುವುದನ್ನು ನೋಡದೇ ಯಾವುದೆ ಫಲಾಪೇಕ್ಷೆಯಿಲ್ಲದೆ ತನ್ನ ಕೆಲಸವನ್ನು ದಿನದ ಇಪ್ಪತ್ತನಾಲ್ಕುಗಂಟೆಗಳಲ್ಲೂ ತೊಡಗಿಸಿಕೊಂಡಿದ್ದರು.

ಅಯೂಬ್ ಅಹ್ಮದ್ ವೃತ್ತಿಯಲ್ಲಿ ಮಂಡಿ ಮಾರ್ಕೆಟ್ ನಲ್ಲಿ ಕೂಲಿ ಕೆಲಸಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ತನ್ನ ನಿಷ್ಕಲ್ಮಶ ಮನಸ್ಸಿನಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅನಾಥ ಮೃತದೇಹಗಳನ್ನು ಸಾಗಿಸಲೆಂದೇ ಒಂದು ಅಂಬಾಸಿಡರ್ ಮತ್ತು ಮಾರುತಿ ಓಮಿನಿ ಕಾರನ್ನು ಇಟ್ಟುಕೊಂಡಿದ್ದು, ಯಾರೇ ಒಂದು ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದರೆ ಸಾಕು ತಕ್ಷಣ ಆ ಸ್ಥಳಕ್ಕೆ ಹೋಗಿ ಪೊಲೀಸರಿಗೆ ವಿಷಯ ತಲುಪಿಸಿ ಆ ಅನಾಥ ಶವವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಮೂರು ದಿನಗಳ ವರೆಗೆ ಇರಿಸಿ ನಂತರ ಯಾರೂ ಬರದಿದ್ದರೆ ಸ್ವತಃ ಅಯೂಬ್ ಅಹ್ಮದ್ ಅವರೇ ರುದ್ರಭೂಮಿಗೆ ಕೊಂಡೊಯ್ದು ಸ್ವಂತ ಖರ್ಚಿನಲ್ಲೇ ಅಂತ್ಯ ಸಂಸ್ಕಾರ ಮಾಡುತ್ತಾರೆ. ಈ ರೀತಿ ಅವರು ಇದೂವರೆಗೆ 16 ಸಾವಿರ ಮೃತದೇಹಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಕೋವಿಡ್ ಸಮಯದಲ್ಲಿ ಆಪತ್ಬಾಂದವ : ಕೊರೋನ ಸಂದರ್ಭದಲ್ಲಿ ಇಡೀ ವಿಶ್ವವೇ ಹೆದರಿ ಮನೆಯಲ್ಲಿ ಕುಳಿತಿದ್ದರೂ ಅಯೂಬ್ ಅಹ್ಮದ್ ಮಾತ್ರ ಸಕ್ರಿಯವಾಗಿ ಕಾರ್ಯಪ್ರವೃತ್ತರಾಗಿದ್ದರು. ಕೊರೋನಕ್ಕೆ ಬಲಿಯಾದವರನ್ನು ಅವರ ಹೆಂಡತಿ, ಮಕ್ಕಳೇ ಮುಖ ನೋಡಲು ಬಾರದಿದ್ದ ಸಂದರ್ಭದಲ್ಲಿ ಅಯೂಬ್ ಅಹ್ಮದ್ ಮುಂದೆ ನಿಂತು ಶವ ಸಂಸ್ಕಾರ ಮಾಡಿದ್ದಾರೆ.

ಇವರ ಸೇವೆಯನ್ನು ಗುರುತಿಸಿ ಅನೇಕ ಸಂಘ ಸಂಸ್ಥೆಗಳು ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಇದರ ಜೊತೆಗೆ ಅಮೇರಿಕದ ಹಾರ್ಮೋನಿ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡ ಲಭಿಸಿದೆ. ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ವೇಳೆ ದಸರಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಹಾಗಾಗಿ ಶಾಸಕ ತನ್ವೀರ್ ಸೇಠ್ ಮತ್ತು ಸಂಸದ ಪ್ರತಾಪ್ ಸಿಂಹ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 2024 ನೇ ಸಾಲಿ ಪದ್ಮಶ್ರೀ ಪ್ರಶಸ್ತಿಗೆ ಅಯೂಬ್ ಅಹ್ಮದ್ ರನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ.

lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

11 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago