ಮೈಸೂರು

ಸಮಾಜ ಸೇವಕ ಅಯೂಬ್ ಅಹ್ಮದ್ ರಿಗೆ ಪದ್ಮಶ್ರೀ ನೀಡಿ : ಮೊದಿಗೆ ಪತ್ರ ಬರೆದ ಪ್ರತಾಪ್ ಸಿಂಹ,‌ ತನ್ವೀರ್‌ ಸೇಠ್

ಮೈಸೂರು : ಕಳೆದ 22 ವರ್ಷಗಳಿಂದ ಸಾವಿರಾರು ಅನಾಥ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಮೈಸೂರಿನ ‘ಬಾಡಿ ಮಿಯಾನ್’ ಎಂದೇ ಹೆಸರುವಾಸಿಯಾಗಿರುವ ಮೈಸೂರಿನ ರಾಜೀವ್ ನಗರ ನಿವಾಸಿ ಅಯೂಬ್ ಅಹ್ಮದ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಸಂಸದ ಪ್ರತಾಪ್ ಸಿಂಹ ಹಾಗೂ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ಪ್ರಧಾನ ಮಂತ್ರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದಾರೆ.

ರಸ್ತೆಯಲ್ಲಿ, ಕೆರೆ ಅಥವಾ ಹೊಳೆಯಲ್ಲಿ ಸಾವಿಗೀಡಾಗಿ ಯಾರೂ ಮುಟ್ಟಲು ಹಿಂಜರಿಯುವಂತಹ ಮೃತದೇಹಗಳು ಸೇರಿದಂತೆ ಸಾವಿರಾರು ಅನಾಥ ಮೃತದೇಹಗಳನ್ನು ಅಯೂಬ್ ಅಹ್ಮದ್ ಧೈರ್ಯವಾಗಿ ಎತ್ತಿಕೊಂಡು ಹೋಗಿ ತನ್ನ ಸ್ವಂತ ಹಣದಲ್ಲೇ ಅಂತ್ಯಸಂಸ್ಕಾರ ಮಾಡುತ್ತಾರೆ. ಯಾವುದೇ ಜಾತಿ, ಧರ್ಮ ಎನ್ನುವುದನ್ನು ನೋಡದೇ ಯಾವುದೆ ಫಲಾಪೇಕ್ಷೆಯಿಲ್ಲದೆ ತನ್ನ ಕೆಲಸವನ್ನು ದಿನದ ಇಪ್ಪತ್ತನಾಲ್ಕುಗಂಟೆಗಳಲ್ಲೂ ತೊಡಗಿಸಿಕೊಂಡಿದ್ದರು.

ಅಯೂಬ್ ಅಹ್ಮದ್ ವೃತ್ತಿಯಲ್ಲಿ ಮಂಡಿ ಮಾರ್ಕೆಟ್ ನಲ್ಲಿ ಕೂಲಿ ಕೆಲಸಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ತನ್ನ ನಿಷ್ಕಲ್ಮಶ ಮನಸ್ಸಿನಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅನಾಥ ಮೃತದೇಹಗಳನ್ನು ಸಾಗಿಸಲೆಂದೇ ಒಂದು ಅಂಬಾಸಿಡರ್ ಮತ್ತು ಮಾರುತಿ ಓಮಿನಿ ಕಾರನ್ನು ಇಟ್ಟುಕೊಂಡಿದ್ದು, ಯಾರೇ ಒಂದು ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದರೆ ಸಾಕು ತಕ್ಷಣ ಆ ಸ್ಥಳಕ್ಕೆ ಹೋಗಿ ಪೊಲೀಸರಿಗೆ ವಿಷಯ ತಲುಪಿಸಿ ಆ ಅನಾಥ ಶವವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಮೂರು ದಿನಗಳ ವರೆಗೆ ಇರಿಸಿ ನಂತರ ಯಾರೂ ಬರದಿದ್ದರೆ ಸ್ವತಃ ಅಯೂಬ್ ಅಹ್ಮದ್ ಅವರೇ ರುದ್ರಭೂಮಿಗೆ ಕೊಂಡೊಯ್ದು ಸ್ವಂತ ಖರ್ಚಿನಲ್ಲೇ ಅಂತ್ಯ ಸಂಸ್ಕಾರ ಮಾಡುತ್ತಾರೆ. ಈ ರೀತಿ ಅವರು ಇದೂವರೆಗೆ 16 ಸಾವಿರ ಮೃತದೇಹಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಕೋವಿಡ್ ಸಮಯದಲ್ಲಿ ಆಪತ್ಬಾಂದವ : ಕೊರೋನ ಸಂದರ್ಭದಲ್ಲಿ ಇಡೀ ವಿಶ್ವವೇ ಹೆದರಿ ಮನೆಯಲ್ಲಿ ಕುಳಿತಿದ್ದರೂ ಅಯೂಬ್ ಅಹ್ಮದ್ ಮಾತ್ರ ಸಕ್ರಿಯವಾಗಿ ಕಾರ್ಯಪ್ರವೃತ್ತರಾಗಿದ್ದರು. ಕೊರೋನಕ್ಕೆ ಬಲಿಯಾದವರನ್ನು ಅವರ ಹೆಂಡತಿ, ಮಕ್ಕಳೇ ಮುಖ ನೋಡಲು ಬಾರದಿದ್ದ ಸಂದರ್ಭದಲ್ಲಿ ಅಯೂಬ್ ಅಹ್ಮದ್ ಮುಂದೆ ನಿಂತು ಶವ ಸಂಸ್ಕಾರ ಮಾಡಿದ್ದಾರೆ.

ಇವರ ಸೇವೆಯನ್ನು ಗುರುತಿಸಿ ಅನೇಕ ಸಂಘ ಸಂಸ್ಥೆಗಳು ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಇದರ ಜೊತೆಗೆ ಅಮೇರಿಕದ ಹಾರ್ಮೋನಿ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡ ಲಭಿಸಿದೆ. ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ವೇಳೆ ದಸರಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಹಾಗಾಗಿ ಶಾಸಕ ತನ್ವೀರ್ ಸೇಠ್ ಮತ್ತು ಸಂಸದ ಪ್ರತಾಪ್ ಸಿಂಹ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 2024 ನೇ ಸಾಲಿ ಪದ್ಮಶ್ರೀ ಪ್ರಶಸ್ತಿಗೆ ಅಯೂಬ್ ಅಹ್ಮದ್ ರನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ.

lokesh

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

5 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

5 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

5 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

5 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

7 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

8 hours ago