ಮೈಸೂರು

ಚಾಮುಂಡಿಬೆಟ್ಟದಲ್ಲಿ ಯೋಗ ಚಾರಣ, ದುರ್ಗಾನಮಸ್ಕಾರ ವೈಭವ

ಮೈಸೂರು: ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಯೋಗ ಚಾರಣ ಮತ್ತು ದುರ್ಗಾನಮಸ್ಕಾರ ನೆರವೇರಿತು. ಯೋಗ ದಸರಾ ಸೇರಿದಂತೆ ಬಹುತೇಕ ಎಲ್ಲಾ ದಸರಾ ಕಾರ್ಯಕ್ರಮಗಳನ್ನು ಬಹಳ ವ್ಯವಸ್ಥಿತವಾಗಿ ಆಯೋಜಿಸಲಾಗಿದೆ. ಸಾವಿರ ಮೆಟ್ಟಿಲು ಹತ್ತಿ ಬಂದು ಯೋಗ ಮಾಡಿದ್ದಾರೆ. ಸೆ.26ರಿಂದ .3ರವರೆಗೆ ನಿತ್ಯ ಯೋಗಾಸನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೈಸೂರು ದಸರಾ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಜಿಲ್ಲಾ ಉಸ್ತುವಾರಿಯಾಗಿರುವ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್. ಎರಡು ವರ್ಷ ಕೋವಿಡ್ ನಿಂದ ಅದ್ದೂರಿ ದಸರಾ ಮಾಡಿರಲಿಲ್ಲ. ಈಗ ಉನ್ನತಮಟ್ಟದ ಸಮಿತಿ ತೀರ್ಮಾನದಂತೆ ಆಚರಣೆ ಮಾಡಲಾಗುತ್ತಿದ್ದು, ಅಧಿಕಾರಿಗಳು ಕೂಡ ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ ಎಂದರು.

ಬಾರಿ ಕಳೆಕಟ್ಟಿದ ದಸರಾ

ಯೋಗ ದಸರಾ ಸೇರಿದಂತೆ ಬಹುತೇಕ ಎಲ್ಲಾ ದಸರಾ ಕಾರ್ಯಕ್ರಮಗಳನ್ನು ಬಹಳ ವ್ಯವಸ್ಥಿತವಾಗಿ ಆಯೋಜಿಸಲಾಗಿದೆ. ಸಾವಿರ ಮೆಟ್ಟಿಲು ಹತ್ತಿ ಬಂದು ಯೋಗ ಮಾಡಿದ್ದಾರೆ. ಸೆ.26ರಿಂದ ಅ.3ರವರೆಗೆ ನಿತ್ಯ ಯೋಗಾಸನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಈ ಬಾರಿ ದಸರಾ ಕಳೆಕಟ್ಟಿದೆ. ಬಹುತೇಕ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇನೆ. ಎಲ್ಲಾ ಅಚ್ಚುಕಟ್ಟಾಗಿ ಮಾಡಲಾಗಿದ್ದು, ಪ್ರತ್ಯಕ್ಷ, ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.

ಬಹುತೇಕ ಕಾರ್ಯಕ್ರಮಗಳು ಇಂದು ಅಂತ್ಯವಾಗಲಿದೆ. ನಾಳೆ ಮೆರವಣಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಮುಖ್ಯಮಂತ್ರಿಗಳು ಸಹ ನಾಳೆ ಸಂಜೆ ಆಗಮಿಸಲಿದ್ದಾರೆ. ಎರಡು ವರ್ಷ ಕೋವಿಡ್ ನಿಂದ ಅದ್ದೂರಿ ದಸರಾ ಮಾಡಿರಲಿಲ್ಲ. ಉನ್ನತಮಟ್ಟದ ಸಮಿತಿ ತೀರ್ಮಾನದಂತೆ ಆಚರಣೆ ಮಾಡಲಾಗುತ್ತಿದ್ದು, ಅಧಿಕಾರಿಗಳು ಕೂಡ ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಶಿವಣ್ಣ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.

andolana

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

3 hours ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

3 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

4 hours ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

4 hours ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

4 hours ago