ಮೈಸೂರು

ಚಾಮುಂಡಿಬೆಟ್ಟದಲ್ಲಿ ಯೋಗ ಚಾರಣ, ದುರ್ಗಾನಮಸ್ಕಾರ ವೈಭವ

ಮೈಸೂರು: ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಯೋಗ ಚಾರಣ ಮತ್ತು ದುರ್ಗಾನಮಸ್ಕಾರ ನೆರವೇರಿತು. ಯೋಗ ದಸರಾ ಸೇರಿದಂತೆ ಬಹುತೇಕ ಎಲ್ಲಾ ದಸರಾ ಕಾರ್ಯಕ್ರಮಗಳನ್ನು ಬಹಳ ವ್ಯವಸ್ಥಿತವಾಗಿ ಆಯೋಜಿಸಲಾಗಿದೆ. ಸಾವಿರ ಮೆಟ್ಟಿಲು ಹತ್ತಿ ಬಂದು ಯೋಗ ಮಾಡಿದ್ದಾರೆ. ಸೆ.26ರಿಂದ .3ರವರೆಗೆ ನಿತ್ಯ ಯೋಗಾಸನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೈಸೂರು ದಸರಾ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಜಿಲ್ಲಾ ಉಸ್ತುವಾರಿಯಾಗಿರುವ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್. ಎರಡು ವರ್ಷ ಕೋವಿಡ್ ನಿಂದ ಅದ್ದೂರಿ ದಸರಾ ಮಾಡಿರಲಿಲ್ಲ. ಈಗ ಉನ್ನತಮಟ್ಟದ ಸಮಿತಿ ತೀರ್ಮಾನದಂತೆ ಆಚರಣೆ ಮಾಡಲಾಗುತ್ತಿದ್ದು, ಅಧಿಕಾರಿಗಳು ಕೂಡ ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ ಎಂದರು.

ಬಾರಿ ಕಳೆಕಟ್ಟಿದ ದಸರಾ

ಯೋಗ ದಸರಾ ಸೇರಿದಂತೆ ಬಹುತೇಕ ಎಲ್ಲಾ ದಸರಾ ಕಾರ್ಯಕ್ರಮಗಳನ್ನು ಬಹಳ ವ್ಯವಸ್ಥಿತವಾಗಿ ಆಯೋಜಿಸಲಾಗಿದೆ. ಸಾವಿರ ಮೆಟ್ಟಿಲು ಹತ್ತಿ ಬಂದು ಯೋಗ ಮಾಡಿದ್ದಾರೆ. ಸೆ.26ರಿಂದ ಅ.3ರವರೆಗೆ ನಿತ್ಯ ಯೋಗಾಸನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಈ ಬಾರಿ ದಸರಾ ಕಳೆಕಟ್ಟಿದೆ. ಬಹುತೇಕ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇನೆ. ಎಲ್ಲಾ ಅಚ್ಚುಕಟ್ಟಾಗಿ ಮಾಡಲಾಗಿದ್ದು, ಪ್ರತ್ಯಕ್ಷ, ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.

ಬಹುತೇಕ ಕಾರ್ಯಕ್ರಮಗಳು ಇಂದು ಅಂತ್ಯವಾಗಲಿದೆ. ನಾಳೆ ಮೆರವಣಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಮುಖ್ಯಮಂತ್ರಿಗಳು ಸಹ ನಾಳೆ ಸಂಜೆ ಆಗಮಿಸಲಿದ್ದಾರೆ. ಎರಡು ವರ್ಷ ಕೋವಿಡ್ ನಿಂದ ಅದ್ದೂರಿ ದಸರಾ ಮಾಡಿರಲಿಲ್ಲ. ಉನ್ನತಮಟ್ಟದ ಸಮಿತಿ ತೀರ್ಮಾನದಂತೆ ಆಚರಣೆ ಮಾಡಲಾಗುತ್ತಿದ್ದು, ಅಧಿಕಾರಿಗಳು ಕೂಡ ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಶಿವಣ್ಣ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago