ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಕೈ ಜ್ಯುವೆಲ್ಲರಿ ಶಾಪ್ಗೆ ಗೆ ಐಜಿಪಿ ಬೋರಲಿಂಗಯ್ಯ ಹಾಗೂ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಐಜಿಪಿ, ನಾಲ್ಕೈದು ಮುಸುಕುದಾರಿಗಳು ಏಕಾಏಕಿ ಚಿನ್ನದ ಅಂಗಡಿಗೆ ನುಗ್ಗಿ, ಸಿಬ್ಬಂದಿಗಳಿಗೆ ಬೆದರಿಸಿ ಅವರನ್ನೇ ಬಳಸಿಕೊಂಡು ಚೀಲಕ್ಕೆ ಚಿನ್ನಭರಣಗಳನ್ನು ತುಂಬಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ
ಇನ್ನೂ ಆರೋಪಿಗಳು 7 ರಿಂದ 8 ನಿಮಿಷದಲ್ಲಿ ಕೃತ್ಯ ಎಸಗಿ ಪರಾರಿಯಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೇಳೆ ಮ್ಯಾನೇಜರ್ಗೆ ಗುಂಡು ಸಹ ಹಾರಿಸಿದ್ದಾರೆ. ಇನ್ನೂ ಅಂಗಡಿಯಿಂದ ಹೊರಬಂದ ಆರೋಪಿಗಳು ಸಾರ್ವಜನಿಕರಲ್ಲಿ ಭಯ ಹುಟ್ಟಿಸಲು ಗಾಳಿಯಲ್ಲಿಯೂ ಗುಂಡು ಹಾರಿಸಿದ್ದಾರೆ. ಆವಾಗ ಸಾರ್ವಜನಿಕರ ಸಹ ಅವರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಸಿಸಿಟಿವಿ ಪರಿಶೀಲಿಸಿದ್ದು, ಪತ್ತೆಗೆ ತಂಡ ರಚಿಸಿದ್ದೇವೆ ಎಂದು ತಿಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…