ಮೈಸೂರು

ಬಿಎ, ಎಲ್‌ಎಲ್‌ಬಿ ವಿದ್ಯಾರ್ಥಿನಿ ಪ್ರತಿಕ್ಷ ಪಾವಸ್ಕರ್‌ಗೆ ಸಿಎಂ ಸಿದ್ದರಾಮಯ್ಯ ಹೆಸರಿನ ಚಿನ್ನದ ಪದಕ

ಮೈಸೂರು: ಬಿಎ, ಎಲ್‌ಎಲ್‌ಬಿ ಐದು ವರ್ಷದ ಪದವಿ ವ್ಯಾಸಂಗದಲ್ಲಿ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾಗಿದ್ದ ಪ್ರತಿಕ್ಷ ಪಾವಸ್ಕರ್‌ ಅವರು ಸಿದ್ದರಾಮಯ್ಯ 75ನೇ ಅಮೃತ ಮಹೋತ್ಸವದ ಚಿನ್ನದ ಪದಕ ಹಾಗೂ ಘಟಿಕೋತ್ಸವ ಪ್ರಮಾಣ ಪತ್ರವನ್ನು ಮುಡಿಗೇರಿಸಿಕೊಂಡಿದ್ದಾರೆ.

ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿಜೆ. ವಿಜಯ್ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಪದಾಧಿಕಾರಿಗಳು 6.8.2022 ರಂದು ಸಭೆ ಸೇರಿ ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಚಿನ್ನದ ದತ್ತಿ ನೀಡುವ ನಿರ್ಣಯವನ್ನ ಅಂಗೀಕರಿಸಿತ್ತು.

ಈ ಅಂಗೀಕಾರದ ಅನ್ವಯ ಪ್ರತಿ ವರ್ಷ ಘಟಿಕೋತ್ಸವದ ವೇಳೆ ಬಿಎ, ಎಲ್‌ಎಲ್‌ಬಿ ಐದು ವರ್ಷದ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ/ ವಿದ್ಯಾರ್ಥಿನಿಗೆ ಸಿದ್ದರಾಮಯ್ಯ 75 ಅಮೃತ ಮಹೋತ್ಸವ ಚಿನ್ನದ ಪದಕವನ್ನು ನೀಡಲಾಗುತ್ತಿತ್ತು. ಅಂತೆಯೇ 2024-25ನೇ ಶೈಕ್ಷಣಿಕ ವರ್ಷದಲ್ಲಿ ಪ್ರತಿಕ್ಷ ಪಾವಸ್ಕರ್ ಅವರಿಗೆ ಸಿದ್ದರಾಮಯ್ಯ ಹೆಸರಿನ ಚಿನ್ನದ ಪದಕವನ್ನು ನೀಡಲಾಗಿತ್ತು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಈ ವಿಷಯವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ. ಈ ವಿಷಯ ತಿಳಿದ ತಕ್ಷಣವೇ ಸಿಎಂ ಸಿದ್ದರಾಮಯ್ಯ ಅವರು ಸ್ವತಃ ಪ್ರತಿಕ್ಷಾ ಅವರನ್ನು ತಮ್ಮ ಮೈಸೂರು ನಿವಾಸಕ್ಕೆ ಕರೆಸಿ ಅಭಿನಂದಿಸಿದ್ದಾರೆ.

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ನನ್ನ ಹೆಸರಿನಲ್ಲಿ ಚಿನ್ನದ ಪದಕದ ದತ್ತಿ ನೀಡಿದ್ದು ನನಗೆ ಗೊತ್ತಿರಲಿಲ್ಲ. ಆದರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಾನ್ವಿತರನ್ನ ಪ್ರೋತ್ಸಾಹಿಸುವ ಈ ಉದ್ದೇಶ ತುಂಬಾ ಉತ್ತಮ ಬೆಳವಣಿಗೆಯಾಗಿದೆ ಎಂದರು. ಜೊತೆಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯವೈಖರಿ ಹಾಗೂ ಕಳೆದ ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಶ್ರಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಪ್ರಾಮಾಣಿಕ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಾರ್ಚ್ 15 ರಂದು ಶಂಕು ಸ್ಥಾಪನೆ

ಇದೇ ಸಂದರ್ಭದಲ್ಲಿ ಮೈಸೂರಿನ ರೈಲ್ವೆ ನಿಲ್ದಾಣದ ಪಕ್ಕದ ಖಾಲಿ ಜಾಗದಲ್ಲಿ ಕಾಂಗ್ರೆಸ್ ಭವನಕ್ಕೆ ಮುಂಬರುವ ಮಾರ್ಚ್ 15 ರಂದು ಶಂಕು ಸ್ಥಾಪನೆ ನೆರವೇರಿಸಲಾಗುತ್ತದೆ. ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಬಿಜೆ. ವಿಜಯಕುಮಾರ್ ಹಾಗೂ ಪದಾಧಿಕಾರಿಗಳಿಗೆ ಸೂಚನೆ ನೀಡಿದರು.

ಅರ್ಚನ ಎಸ್‌ ಎಸ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

5 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

6 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

7 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

7 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

9 hours ago