ಮೈಸೂರು

ಹುಣಸೂರಿನಲ್ಲಿ ಚಿನ್ನ ದೋಚಿದ್ದ ಪ್ರಕರಣ: ಬಿಹಾರದಲ್ಲಿ ಖದೀಮರು ಅರೆಸ್ಟ್‌

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಭರಣ ಮಳಿಗೆಯೊಂದರಲ್ಲಿ ಡಿಸೆಂಬರ್.‌28ರಂದು ನಡೆದ 10 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಿಹಾರ ರಾಜ್ಯದ ಬಾಗಲ್ಪುರ್‌ ಜಿಲ್ಲೆಯ ಪಂಕಜ್‌ ಕುಮಾರ್, ದರ್ಬಾಂಗ್‌ ಜಿಲ್ಲೆಯ ಹೃಷಿಕೇಶ್ ಸಿಂಗ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಕರ್ನಾಟಕ ಪೊಲೀಸರು ಬಿಹಾರದ ಎಸ್‌ಟಿಎಫ್‌ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರಿಂದ ಚಿನ್ನಾಭರಣ ಮಳಿಗೆಯಲ್ಲಿ ಕಳವು ಮಾಡಿದ್ದ ಉಂಗುರ, ಚಿನ್ನದ ಸರ, ಒಂದು ಲಕ್ಷ ರೂಪಾಯಿ ನಗದು, ಬೈಕ್‌ನ್ನು ವಶಕ್ಕೆ ಪಡೆಯಲಾಗಿದೆ.

ಪಂಕಜ್‌ ಕುಮಾರ್‌ ವಿರುದ್ಧ ಕರ್ನಾಟಕ, ಬಿಹಾರ, ಜಾರ್ಖಂಡ್‌, ರಾಜಸ್ಥಾನ ರಾಜ್ಯಗಳಲ್ಲಿ ಕೊಲೆ ಕಳ್ಳತನ ಸೇರಿದಂತೆ ಹಲವು ಪ್ರಕರಣ ದಾಖಲಾಗಿದೆ. ಹೃಷಿಕೇಶ್‌ ವಿರುದ್ಧ ಬಿಹಾರದಲ್ಲಿ ನಾಲ್ಕು ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ.

ಈ ದರೋಡೆಕೋರರನ್ನು ಪತ್ತೆ ಹಚ್ಚಲು ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದರು. ದರೋಡೆ ನಡೆದ ಸಂದರ್ಭದಲ್ಲಿ ಆರೋಪಿಗಳ ಚಲನವಲನಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದ್ದವು, ಇದು ತನಿಖೆಗೆ ಪ್ರಮುಖ ಸುಳಿವು ನೀಡಿತು.

ಈ ಘಟನೆ ವೇಳೆ ಖದೀಮರು ಹಗಲು ಹೊತ್ತಿನಲ್ಲೇ ಚಿನ್ನದಂಗಡಿಗೆ ನುಗ್ಗಿ, ಸುಮಾರು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಈ ಘಟನೆಯು ಹುಣಸೂರು ನಗರದಲ್ಲಿ ಆತಂಕಕ್ಕೆ ಕಾರಣವಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 150 ನೆಕ್ಲೆಸ್‌, 70 ಉಂಗುರ, 64 ಬಳೆ, 65 ಚಿನ್ನದ ಸರ, 19 ಕರಿಮಣಿ ಸರ, 13 ವಜ್ರದ ಉಂಗುರ, 17 ಕಿವಿಯೋಲೆ, 12 ಲಾಕೆಟ್‌, 12 ಕಾಲುಚೈನು, 8 ಬ್ರೇಸ್‌ಲೈಟ್‌ ಕಳುವಾಗಿದೆ ಎಂದು ಅಂಗಡಿ ಮಾಲೀಕ ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಬಿಹಾರದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

21 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

21 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

21 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago