Young handsome physician in a medical robe with stethoscope
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸೂಕ್ತ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸೂಕ್ತ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಶೀಘ್ರದಲ್ಲಿಯೇ ಗೃಹ ಆರೋಗ್ಯ ಯೋಜನೆ ಅನುಷ್ಠಾನಗೊಳಿಸುತ್ತಿದೆ.
30 ವರ್ಷ ಮೇಲ್ಪಟ್ಟ ಜನರ ಮನೆ ಬಾಗಿಲಿಗೆ ಈ ಯೋಜನೆ ಅನ್ವಯಿಸಲಿದ್ದು, ಸಮಗ್ರ ತಪಾಸಣೆ, ನಿರ್ವಹಣೆ ಮತ್ತು ಔಷಧ ವಿತರಣೆ ಸೇವೆ ತಲುಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಈ ಯೋಜನೆಗಾಗಿಯೇ ಈಗಾಗಲೇ ಜಿಲ್ಲೆಯ ಪ್ರತೀ ಹಳ್ಳಿಗಳಿಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, 30 ವರ್ಷ ಮೇಲ್ಪಟ್ಟ ಜನರನ್ನು ಪರೀಕ್ಷೆಗೆ ಒಳಪಡಿಸಿದೆ.
ಈಗಾಗಲೇ ಸಮೀಕ್ಷೆ ಪೂರ್ಣಗೊಂಡಿದ್ದು, ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿರುವವರಿಗೆ ಔಷಧ ವಿತರಿಸಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಮನೆ ಮನೆಗೆ ಭೇಟಿ ನೀಡಲಿರುವ ಆರೋಗ್ಯ ಇಲಾಖೆ ಸಿಬ್ಬಂದಿ, ಕಾಯಿಲೆಗಳಿಗೆ ತಕ್ಕಂತೆ ಸೇವಿಸಬೇಕಾದ ಆಹಾರ ಕ್ರಮ, ವ್ಯಾಯಾಮ ಸೇರಿದಂತೆ ಒಟ್ಟಾಗಿ ಕಾಯಿಲೆಯನ್ನು ಹೇಗೆ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿಕೊಡಲಾಗುತ್ತದೆ. ಇದರ ಜೊತೆ ಜೊತೆಗೆ ಕ್ಯಾನ್ಸರ್ಗೆ ಸಂಬಂಧಿಸಿದಂತೆ ಜಾಗೃತಿಯನ್ನು ಸಹ ಮೂಡಿಸಲಾಗುತ್ತದೆ.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…