Young handsome physician in a medical robe with stethoscope
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸೂಕ್ತ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಸೂಕ್ತ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಶೀಘ್ರದಲ್ಲಿಯೇ ಗೃಹ ಆರೋಗ್ಯ ಯೋಜನೆ ಅನುಷ್ಠಾನಗೊಳಿಸುತ್ತಿದೆ.
30 ವರ್ಷ ಮೇಲ್ಪಟ್ಟ ಜನರ ಮನೆ ಬಾಗಿಲಿಗೆ ಈ ಯೋಜನೆ ಅನ್ವಯಿಸಲಿದ್ದು, ಸಮಗ್ರ ತಪಾಸಣೆ, ನಿರ್ವಹಣೆ ಮತ್ತು ಔಷಧ ವಿತರಣೆ ಸೇವೆ ತಲುಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಈ ಯೋಜನೆಗಾಗಿಯೇ ಈಗಾಗಲೇ ಜಿಲ್ಲೆಯ ಪ್ರತೀ ಹಳ್ಳಿಗಳಿಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, 30 ವರ್ಷ ಮೇಲ್ಪಟ್ಟ ಜನರನ್ನು ಪರೀಕ್ಷೆಗೆ ಒಳಪಡಿಸಿದೆ.
ಈಗಾಗಲೇ ಸಮೀಕ್ಷೆ ಪೂರ್ಣಗೊಂಡಿದ್ದು, ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿರುವವರಿಗೆ ಔಷಧ ವಿತರಿಸಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಮನೆ ಮನೆಗೆ ಭೇಟಿ ನೀಡಲಿರುವ ಆರೋಗ್ಯ ಇಲಾಖೆ ಸಿಬ್ಬಂದಿ, ಕಾಯಿಲೆಗಳಿಗೆ ತಕ್ಕಂತೆ ಸೇವಿಸಬೇಕಾದ ಆಹಾರ ಕ್ರಮ, ವ್ಯಾಯಾಮ ಸೇರಿದಂತೆ ಒಟ್ಟಾಗಿ ಕಾಯಿಲೆಯನ್ನು ಹೇಗೆ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿಕೊಡಲಾಗುತ್ತದೆ. ಇದರ ಜೊತೆ ಜೊತೆಗೆ ಕ್ಯಾನ್ಸರ್ಗೆ ಸಂಬಂಧಿಸಿದಂತೆ ಜಾಗೃತಿಯನ್ನು ಸಹ ಮೂಡಿಸಲಾಗುತ್ತದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…