ಮೈಸೂರು

ಗೂಡ್ಸ್ ಆಟೋ ಪಲ್ಟಿ | 15 ಕಾರ್ಮಿಕರು ಗಂಭೀರ

ಸರಗೂರು : ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ ಪಲ್ಟಿ ಹೊಡೆದು ಮೂವರು ಗಂಭೀರ ಗಾಯಗೊಂಡಿದ್ದು, 12 ಮಂದಿ ಗಾಯಗೊಂಡಿರುವ ಘಟನೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ಹುಣಸೂರು-ಎನ್.ಬೇಗೂರು ರಸ್ತೆಯಲ್ಲಿ ಕಬಿನಿ ಬಲದಂಡೆ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.

ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಂತಗಾಲದಹುಂಡಿ ಗ್ರಾಮದ ಹರ್ಷಿತಾ, ಮಂಜುಳಾ, ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ ಪುಟ್ಟಿ, ಪುಟ್ಟಮ್ಮ, ಭಾಗ್ಯ, ಜೌಡಮ್ಮ, ಶ್ರುತಿ, ಮಹದೇವಮ್ಮ, ನಾಗಮ್ಮ, ಕಾಳಮ್ಮ, ಅಶ್ವಿನಿ, ವಾದಮ್ಮ, ಸಿದ್ದಶಟ್ಟಿ, ವಾದಮ್ಮ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪಟ್ಟಣದ ಸ್ವಾಮಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:-ಸಿಜೆಐ ಮೇಲೆ ದಾಳಿ : ವಕೀಲ ರಾಕೇಶ್‌ ಕಿಶೋರ್‌ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ʻಎಜಿʼ ಒಪ್ಪಿಗೆ

ಶುಂಠಿ ಕಾರ್ಮಿಕರು:
ಗೊಂತಗಾಲದಹುಂಡಿ ಗ್ರಾಮದಿಂದ ೧೫ಕ್ಕೂ ಹೆಚ್ಚು ಮಹಿಳೆಯ ಶುಂಠಿ ಕೆಲಸಕ್ಕೆಂದು ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದಾಗ ಚಾಲಕನ ಅಜಾರೂಕತೆಯಿಂದಾಗಿ ಗೂಡ್ಸ್ ಆಟೋ ಕಬಿನಿ ಬಲದಂಡೆ ಸಮೀಪದಲ್ಲಿ ಪಲ್ಟಿ ಹೊಡೆದಿದ್ದು, ಆಟೋದಲ್ಲಿದ್ದ ಎಲ್ಲರೂ ರಸ್ತೆಗೆ ಬಿದ್ದಿದ್ದಾರೆ. ಕೂಡಲೇ ಪ್ರಾಂಣಿಕರು ಆಟೋದ ಕೆಳಗಡೆ ಸಿಲುಕಿಕೊಂಡಿದ್ದವರನ್ನು ರಕ್ಷಣೆ ವಾಡಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಒಂದೂವರೆ ತಾಸು ಬಾರದ ಅಂಬ್ಯುಲೆನ್ಸ್:
ಗುರುವಾರ ಬೆಳಿಗ್ಗೆ ೭.೩೦ಕ್ಕೆ ಘಟನೆ ನಡೆದರೂ ೯ ಗಂಟೆಯಾದರೂ ಆಂಬ್ಯುಲೆನ್ಸ್ ಸ್ಥಳಕ್ಕಾಗಮಿಸಲಿಲ್ಲ. ಎಷ್ಟೆ ಕರೆ ವಾಡಿದರೂ ಸಬೂಬು ಹೇಳುವುದೇ ಆಯಿತು. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ತಾಲ್ಲೂಕು ಆಡಳಿತ, ಶಾಸಕರ ವಿರುದ್ಧ ಕಿಡಿಕಾರಿದರು. ಇದಲ್ಲದೆ ಕೂಡಲೇ ಸರಗೂರಿಗೆ ಸರ್ಕಾರ ಆಂಬ್ಯುಲೆನ್ಸ್ ಸೇವೆ ಒದಗಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಘಟನೆ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago