ಸರಗೂರು : ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ ಪಲ್ಟಿ ಹೊಡೆದು ಮೂವರು ಗಂಭೀರ ಗಾಯಗೊಂಡಿದ್ದು, 12 ಮಂದಿ ಗಾಯಗೊಂಡಿರುವ ಘಟನೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ಹುಣಸೂರು-ಎನ್.ಬೇಗೂರು ರಸ್ತೆಯಲ್ಲಿ ಕಬಿನಿ ಬಲದಂಡೆ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.
ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಂತಗಾಲದಹುಂಡಿ ಗ್ರಾಮದ ಹರ್ಷಿತಾ, ಮಂಜುಳಾ, ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ ಪುಟ್ಟಿ, ಪುಟ್ಟಮ್ಮ, ಭಾಗ್ಯ, ಜೌಡಮ್ಮ, ಶ್ರುತಿ, ಮಹದೇವಮ್ಮ, ನಾಗಮ್ಮ, ಕಾಳಮ್ಮ, ಅಶ್ವಿನಿ, ವಾದಮ್ಮ, ಸಿದ್ದಶಟ್ಟಿ, ವಾದಮ್ಮ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪಟ್ಟಣದ ಸ್ವಾಮಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:-ಸಿಜೆಐ ಮೇಲೆ ದಾಳಿ : ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ʻಎಜಿʼ ಒಪ್ಪಿಗೆ
ಶುಂಠಿ ಕಾರ್ಮಿಕರು:
ಗೊಂತಗಾಲದಹುಂಡಿ ಗ್ರಾಮದಿಂದ ೧೫ಕ್ಕೂ ಹೆಚ್ಚು ಮಹಿಳೆಯ ಶುಂಠಿ ಕೆಲಸಕ್ಕೆಂದು ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದಾಗ ಚಾಲಕನ ಅಜಾರೂಕತೆಯಿಂದಾಗಿ ಗೂಡ್ಸ್ ಆಟೋ ಕಬಿನಿ ಬಲದಂಡೆ ಸಮೀಪದಲ್ಲಿ ಪಲ್ಟಿ ಹೊಡೆದಿದ್ದು, ಆಟೋದಲ್ಲಿದ್ದ ಎಲ್ಲರೂ ರಸ್ತೆಗೆ ಬಿದ್ದಿದ್ದಾರೆ. ಕೂಡಲೇ ಪ್ರಾಂಣಿಕರು ಆಟೋದ ಕೆಳಗಡೆ ಸಿಲುಕಿಕೊಂಡಿದ್ದವರನ್ನು ರಕ್ಷಣೆ ವಾಡಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ಒಂದೂವರೆ ತಾಸು ಬಾರದ ಅಂಬ್ಯುಲೆನ್ಸ್:
ಗುರುವಾರ ಬೆಳಿಗ್ಗೆ ೭.೩೦ಕ್ಕೆ ಘಟನೆ ನಡೆದರೂ ೯ ಗಂಟೆಯಾದರೂ ಆಂಬ್ಯುಲೆನ್ಸ್ ಸ್ಥಳಕ್ಕಾಗಮಿಸಲಿಲ್ಲ. ಎಷ್ಟೆ ಕರೆ ವಾಡಿದರೂ ಸಬೂಬು ಹೇಳುವುದೇ ಆಯಿತು. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ತಾಲ್ಲೂಕು ಆಡಳಿತ, ಶಾಸಕರ ವಿರುದ್ಧ ಕಿಡಿಕಾರಿದರು. ಇದಲ್ಲದೆ ಕೂಡಲೇ ಸರಗೂರಿಗೆ ಸರ್ಕಾರ ಆಂಬ್ಯುಲೆನ್ಸ್ ಸೇವೆ ಒದಗಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಘಟನೆ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು: ಪ್ಯಾಸೆಂಜರ್ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್ ಆಟೋದಲ್ಲಿ ಮೈಸೂರಿನಿಂದ…
ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…
ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…
ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…