ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಪಟ್ಟಣದಲ್ಲಿ ಶುಕ್ರವಾರ ಜನರೊಂದಿಗೆ ಜನತಾದಳ ಸಮಾವೇಶವನ್ನು ಉದ್ಘಾಟಿಸಿ ಮಾತಾಡಿದ ಅವರು, ರಾಜ್ಯ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ಸಾಲದ ಹೊರೆಯ ಬಜೆಟ್ ಮಂಡಿಸಿದೆ. ಆ ಮೂಲಕ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರ ಮೇಲೆ ಸಾಲದ ಹೊರೆ ಹೊರಿಸಿದ್ದಾರೆ.
ಒಂದೆಡೆ ಮಾನವ – ವನ್ಯಪ್ರಾಣಿಗಳ ಸಂಘರ್ಷದಿಂದ ಪ್ರತಿ ವರ್ಷ ಅನೇಕ ರೈತರು ಬಲಿಯಾಗುತ್ತಿದ್ದಾರೆ. ಅಲ್ಲದೆ, ಅವರು ಬೆಳೆದ ಬೆಳೆಗಳು ನಾಶವಾಗುತ್ತಿವೆ. ಕಾಡುಪ್ರಾಣಿಗಳ ಹಾವಳಿಯಿಂದ ಸಂತ್ರಸ್ತರಾದ ರೈತ ರೈತ ಕುಟುಂಬಗಳಿಗೆ ದೊಡ್ಡ ಮೊತ್ತದ ಪರಿಹಾರ ನೀಡಲು ಸರ್ಕಾರದ ಬಳಿ ಹಣವೇ ಇಲ್ಲ. ಆದರೆ, ಸರ್ಕಾರ ಜನರ ತೆರಿಗೆ ಹಣವನ್ನು ಬೇರೆ ರಾಜ್ಯಗಳಿಗೆ ಕೋಟಿಗಟ್ಟಲೆ ನೀಡುತ್ತಿರುವುದು ವಿಪರ್ಯಾಸವಾಗಿದೆ ಎಂದರು.
ಮಾನವ ಮತ್ತು ಪ್ರಾಣಿಗಳ ಸಂಘರ್ಷಕ್ಕೆ ಪ್ರತಿ ವರ್ಷ ಅಪಾರ ನಷ್ಟವಾಗುತ್ತಿದ್ದು, ಇದನ್ನು ನಿಯಂತ್ರಿಸಲು ಮುಖ್ಯಮಂತ್ರಿಗಳು ಮತ್ತು ಅರಣ್ಯ ಸಚಿವರು ವಿಫಲರಾಗಿದ್ದಾರೆ. ಗ್ರಾಮಗಳೂ ಅಭಿವೃದ್ಧಿ ಕಾಣದೆ ಮೂಲಸೌಕರ್ಯ ವಂಚಿತವಾಗಿದ್ದು, ಜನಸಾಮಾನ್ಯರ ಆದಷ್ಟು ಬೇಗ ಈ ಸರ್ಕಾರವನ್ನು ಕಿತ್ತೊಗೆಯಬೇಕೆಂಬ ಆಶಾಭಾವನೆ ಹೊಂದಿದ್ದಾರೆ ಎಂದರು.
ಶಾಸಕರಾದ ಜಿ.ಟಿ.ಹರೀಶ್ ಗೌಡ, ಮಂಚೇಗೌಡ, ಮಾಜಿ ಶಾಸಕರಾದ ಸಾ.ರಾ.ಮಹೇಶ್. ಕೆ.ಮಹಾದೇವ, ಮೈ ಮುಲ್ ಮಾಜಿ ಅಧ್ಯಕ್ಷ ಪ್ರಸನ್ನ, ಕೆ.ಎಂ.ಕೃಷ್ಣನಾಯಕ, ಜಿಲ್ಲಾಧ್ಯಕ್ಷ ಅಶ್ವಿನ್ ಕುಮಾರ್, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಗೋಪಾಲಸ್ವಾಮಿ, ಕಾಳಿಹುಂಡಿ ಸಿದ್ದೇಗೌಡ, ನರಸಿಂಹೇಗೌಡ, ಯೋಗನರಸಿಂಹಗೌಡ, ಬೆಳಗನಳ್ಳಿ ಶಿವರಾಜ, ಕರವೇ ನಟರಾಜ್, ಮಹೇಶ್ ಗುಂಡತ್ತೂರು, ಪ್ರಕಾಶ್, ಸೋಲಾರ್ ಪ್ರದೀಪ ಮತ್ತಿತರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…
ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…
ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…
ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…
ಫಾತಿಮಾ ರಲಿಯಾ ಯು ಟ್ಯೂಬ್ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್ಜಿಪಿಟಿಯ ಬಳಿ…
ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…