ಮೈಸೂರು

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಪಟ್ಟಣದಲ್ಲಿ ಶುಕ್ರವಾರ ಜನರೊಂದಿಗೆ ಜನತಾದಳ ಸಮಾವೇಶವನ್ನು ಉದ್ಘಾಟಿಸಿ ಮಾತಾಡಿದ ಅವರು, ರಾಜ್ಯ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ಸಾಲದ ಹೊರೆಯ ಬಜೆಟ್ ಮಂಡಿಸಿದೆ. ಆ ಮೂಲಕ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರ ಮೇಲೆ ಸಾಲದ ಹೊರೆ ಹೊರಿಸಿದ್ದಾರೆ.

ಒಂದೆಡೆ ಮಾನವ – ವನ್ಯಪ್ರಾಣಿಗಳ ಸಂಘರ್ಷದಿಂದ ಪ್ರತಿ ವರ್ಷ ಅನೇಕ ರೈತರು ಬಲಿಯಾಗುತ್ತಿದ್ದಾರೆ. ಅಲ್ಲದೆ, ಅವರು ಬೆಳೆದ ಬೆಳೆಗಳು ನಾಶವಾಗುತ್ತಿವೆ. ಕಾಡುಪ್ರಾಣಿಗಳ ಹಾವಳಿಯಿಂದ ಸಂತ್ರಸ್ತರಾದ ರೈತ ರೈತ ಕುಟುಂಬಗಳಿಗೆ ದೊಡ್ಡ ಮೊತ್ತದ ಪರಿಹಾರ ನೀಡಲು ಸರ್ಕಾರದ ಬಳಿ ಹಣವೇ ಇಲ್ಲ. ಆದರೆ, ಸರ್ಕಾರ ಜನರ ತೆರಿಗೆ ಹಣವನ್ನು ಬೇರೆ ರಾಜ್ಯಗಳಿಗೆ ಕೋಟಿಗಟ್ಟಲೆ ನೀಡುತ್ತಿರುವುದು ವಿಪರ್ಯಾಸವಾಗಿದೆ ಎಂದರು.

ಮಾನವ ಮತ್ತು ಪ್ರಾಣಿಗಳ ಸಂಘರ್ಷಕ್ಕೆ ಪ್ರತಿ ವರ್ಷ ಅಪಾರ ನಷ್ಟವಾಗುತ್ತಿದ್ದು, ಇದನ್ನು ನಿಯಂತ್ರಿಸಲು ಮುಖ್ಯಮಂತ್ರಿಗಳು ಮತ್ತು ಅರಣ್ಯ ಸಚಿವರು ವಿಫಲರಾಗಿದ್ದಾರೆ. ಗ್ರಾಮಗಳೂ ಅಭಿವೃದ್ಧಿ ಕಾಣದೆ ಮೂಲಸೌಕರ್ಯ ವಂಚಿತವಾಗಿದ್ದು, ಜನಸಾಮಾನ್ಯರ ಆದಷ್ಟು ಬೇಗ ಈ ಸರ್ಕಾರವನ್ನು ಕಿತ್ತೊಗೆಯಬೇಕೆಂಬ ಆಶಾಭಾವನೆ ಹೊಂದಿದ್ದಾರೆ ಎಂದರು.

ಶಾಸಕರಾದ ಜಿ.ಟಿ.ಹರೀಶ್ ಗೌಡ, ಮಂಚೇಗೌಡ, ಮಾಜಿ ಶಾಸಕರಾದ ಸಾ.ರಾ.ಮಹೇಶ್. ಕೆ.ಮಹಾದೇವ, ಮೈ ಮುಲ್ ಮಾಜಿ ಅಧ್ಯಕ್ಷ ಪ್ರಸನ್ನ, ಕೆ.ಎಂ.ಕೃಷ್ಣನಾಯಕ, ಜಿಲ್ಲಾಧ್ಯಕ್ಷ ಅಶ್ವಿನ್ ಕುಮಾರ್, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಗೋಪಾಲಸ್ವಾಮಿ, ಕಾಳಿಹುಂಡಿ ಸಿದ್ದೇಗೌಡ, ನರಸಿಂಹೇಗೌಡ, ಯೋಗನರಸಿಂಹಗೌಡ, ಬೆಳಗನಳ್ಳಿ ಶಿವರಾಜ, ಕರವೇ ನಟರಾಜ್, ಮಹೇಶ್ ಗುಂಡತ್ತೂರು, ಪ್ರಕಾಶ್, ಸೋಲಾರ್ ಪ್ರದೀಪ ಮತ್ತಿತರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

26 mins ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

2 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

2 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

2 hours ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

2 hours ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

4 hours ago