ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಪಟ್ಟಣದಲ್ಲಿ ಶುಕ್ರವಾರ ಜನರೊಂದಿಗೆ ಜನತಾದಳ ಸಮಾವೇಶವನ್ನು ಉದ್ಘಾಟಿಸಿ ಮಾತಾಡಿದ ಅವರು, ರಾಜ್ಯ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ಸಾಲದ ಹೊರೆಯ ಬಜೆಟ್ ಮಂಡಿಸಿದೆ. ಆ ಮೂಲಕ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರ ಮೇಲೆ ಸಾಲದ ಹೊರೆ ಹೊರಿಸಿದ್ದಾರೆ.
ಒಂದೆಡೆ ಮಾನವ – ವನ್ಯಪ್ರಾಣಿಗಳ ಸಂಘರ್ಷದಿಂದ ಪ್ರತಿ ವರ್ಷ ಅನೇಕ ರೈತರು ಬಲಿಯಾಗುತ್ತಿದ್ದಾರೆ. ಅಲ್ಲದೆ, ಅವರು ಬೆಳೆದ ಬೆಳೆಗಳು ನಾಶವಾಗುತ್ತಿವೆ. ಕಾಡುಪ್ರಾಣಿಗಳ ಹಾವಳಿಯಿಂದ ಸಂತ್ರಸ್ತರಾದ ರೈತ ರೈತ ಕುಟುಂಬಗಳಿಗೆ ದೊಡ್ಡ ಮೊತ್ತದ ಪರಿಹಾರ ನೀಡಲು ಸರ್ಕಾರದ ಬಳಿ ಹಣವೇ ಇಲ್ಲ. ಆದರೆ, ಸರ್ಕಾರ ಜನರ ತೆರಿಗೆ ಹಣವನ್ನು ಬೇರೆ ರಾಜ್ಯಗಳಿಗೆ ಕೋಟಿಗಟ್ಟಲೆ ನೀಡುತ್ತಿರುವುದು ವಿಪರ್ಯಾಸವಾಗಿದೆ ಎಂದರು.
ಮಾನವ ಮತ್ತು ಪ್ರಾಣಿಗಳ ಸಂಘರ್ಷಕ್ಕೆ ಪ್ರತಿ ವರ್ಷ ಅಪಾರ ನಷ್ಟವಾಗುತ್ತಿದ್ದು, ಇದನ್ನು ನಿಯಂತ್ರಿಸಲು ಮುಖ್ಯಮಂತ್ರಿಗಳು ಮತ್ತು ಅರಣ್ಯ ಸಚಿವರು ವಿಫಲರಾಗಿದ್ದಾರೆ. ಗ್ರಾಮಗಳೂ ಅಭಿವೃದ್ಧಿ ಕಾಣದೆ ಮೂಲಸೌಕರ್ಯ ವಂಚಿತವಾಗಿದ್ದು, ಜನಸಾಮಾನ್ಯರ ಆದಷ್ಟು ಬೇಗ ಈ ಸರ್ಕಾರವನ್ನು ಕಿತ್ತೊಗೆಯಬೇಕೆಂಬ ಆಶಾಭಾವನೆ ಹೊಂದಿದ್ದಾರೆ ಎಂದರು.
ಶಾಸಕರಾದ ಜಿ.ಟಿ.ಹರೀಶ್ ಗೌಡ, ಮಂಚೇಗೌಡ, ಮಾಜಿ ಶಾಸಕರಾದ ಸಾ.ರಾ.ಮಹೇಶ್. ಕೆ.ಮಹಾದೇವ, ಮೈ ಮುಲ್ ಮಾಜಿ ಅಧ್ಯಕ್ಷ ಪ್ರಸನ್ನ, ಕೆ.ಎಂ.ಕೃಷ್ಣನಾಯಕ, ಜಿಲ್ಲಾಧ್ಯಕ್ಷ ಅಶ್ವಿನ್ ಕುಮಾರ್, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಗೋಪಾಲಸ್ವಾಮಿ, ಕಾಳಿಹುಂಡಿ ಸಿದ್ದೇಗೌಡ, ನರಸಿಂಹೇಗೌಡ, ಯೋಗನರಸಿಂಹಗೌಡ, ಬೆಳಗನಳ್ಳಿ ಶಿವರಾಜ, ಕರವೇ ನಟರಾಜ್, ಮಹೇಶ್ ಗುಂಡತ್ತೂರು, ಪ್ರಕಾಶ್, ಸೋಲಾರ್ ಪ್ರದೀಪ ಮತ್ತಿತರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…