ಮೈಸೂರು: ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ದಿಕ್ಕು ತಪ್ಪಿದ್ದು, ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆಗ್ರಹಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, ಗ್ಯಾರೆಂಟಿ ಯೋಜನೆಗಳು, ಇತರೆ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗಿರುವ ಹಣದ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಜನಸಾಮಾನ್ಯ ರಿಗೆ ಏನು ಬೇಕೋ ಅದನ್ನು ಕೊಡುವುದನ್ನು ಬಿಟ್ಟು ಯಾವ್ಯಾವುದೋ ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಇನ್ನೊಂದು ಕಡೆಯಿಂದ ಸುಲಿಗೆ ಮಾಡುತ್ತಿದೆ. ಅಲ್ಲದೆ ಸರ್ಕಾರವು ಸಾಲದ ಹೊರೆಯಿಂದ ತತ್ತರಿಸುತ್ತಿದೆ ಎಂದು ದೂರಿದರು. ಸರ್ಕಾರದ ವತಿಯಿಂದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬದಲುಹೊರಗುತ್ತಿಗೆ ಆಧಾರದ ಮೇಲೆ ಲಕ್ಷಾಂತರ ಜನರಿಂದ ಕೆಲಸ ಮಾಡಿಸುತ್ತಿದ್ದಾರೆ.
ಇಂತಹ ಗುತ್ತಿಗೆಗಳ ಟೆಂಡರ್ ಅನ್ನು ಸಚಿವರು, ಇತರೆ ರಾಜಕಾರಣಿಗಳ ಸಂಬಂಧಿ ಕರಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಕಾರ್ಮಿಕ ಕಾನೂನು ಪ್ರಕಾರ ಯಾವುದೇ ಹೊರ ಗುತ್ತಿಗೆಯಡಿಯಲ್ಲಿಕಾರ್ಯ ನಿರ್ವಹಿಸುವ ವರಿಗೆ ಕನಿಷ್ಠ 18 ಸಾವಿರ ರೂ. ವೇತನ ಕೊಡ ಬೇಕೆಂಬ ನಿಯಮವಿದೆ. ಆದರೆ 12 ಸಾವಿರ ರೂ. ವೇತನ ಕೊಟ್ಟು ಉಳಿದ 6 ಸಾವಿರ ರೂ. ಗುತ್ತಿಗೆದಾರನ ಜೇಬಿಗೆ ಹೋಗುತ್ತಿದೆ ಎಂದು ದೂರಿದರು.
ಇನ್ನು ನಟ ದರ್ಶನ್ ವಿಚಾರಕ್ಕೆ ಸಂಬಂಧಿಸಿದಂತೆ 2014 ರಲ್ಲಿ ನಟ ದರ್ಶನ್ ನನ್ನ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದರು. ಆಗ ಅವರ ತಾಯಿ ಕಾಂಗ್ರೆಸ್ನಲ್ಲಿದ್ದರು. ನಾನೇಕೆ ದರ್ಶನ್ ವಿರುದ್ಧವಾಗಿ ಸಾಕ್ಷಿ ಹೇಳಬೇಕು. ನಮ್ಮ ನಟರೆಲ್ಲರಿಗೂ ಮಾದರಿಯಾಗಬೇಕು ಎಂದು ಉತ್ತರಿಸಿದರು.
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…