ಮೈಸೂರು: ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ದಿಕ್ಕು ತಪ್ಪಿದ್ದು, ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆಗ್ರಹಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, ಗ್ಯಾರೆಂಟಿ ಯೋಜನೆಗಳು, ಇತರೆ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗಿರುವ ಹಣದ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಜನಸಾಮಾನ್ಯ ರಿಗೆ ಏನು ಬೇಕೋ ಅದನ್ನು ಕೊಡುವುದನ್ನು ಬಿಟ್ಟು ಯಾವ್ಯಾವುದೋ ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಇನ್ನೊಂದು ಕಡೆಯಿಂದ ಸುಲಿಗೆ ಮಾಡುತ್ತಿದೆ. ಅಲ್ಲದೆ ಸರ್ಕಾರವು ಸಾಲದ ಹೊರೆಯಿಂದ ತತ್ತರಿಸುತ್ತಿದೆ ಎಂದು ದೂರಿದರು. ಸರ್ಕಾರದ ವತಿಯಿಂದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬದಲುಹೊರಗುತ್ತಿಗೆ ಆಧಾರದ ಮೇಲೆ ಲಕ್ಷಾಂತರ ಜನರಿಂದ ಕೆಲಸ ಮಾಡಿಸುತ್ತಿದ್ದಾರೆ.
ಇಂತಹ ಗುತ್ತಿಗೆಗಳ ಟೆಂಡರ್ ಅನ್ನು ಸಚಿವರು, ಇತರೆ ರಾಜಕಾರಣಿಗಳ ಸಂಬಂಧಿ ಕರಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಕಾರ್ಮಿಕ ಕಾನೂನು ಪ್ರಕಾರ ಯಾವುದೇ ಹೊರ ಗುತ್ತಿಗೆಯಡಿಯಲ್ಲಿಕಾರ್ಯ ನಿರ್ವಹಿಸುವ ವರಿಗೆ ಕನಿಷ್ಠ 18 ಸಾವಿರ ರೂ. ವೇತನ ಕೊಡ ಬೇಕೆಂಬ ನಿಯಮವಿದೆ. ಆದರೆ 12 ಸಾವಿರ ರೂ. ವೇತನ ಕೊಟ್ಟು ಉಳಿದ 6 ಸಾವಿರ ರೂ. ಗುತ್ತಿಗೆದಾರನ ಜೇಬಿಗೆ ಹೋಗುತ್ತಿದೆ ಎಂದು ದೂರಿದರು.
ಇನ್ನು ನಟ ದರ್ಶನ್ ವಿಚಾರಕ್ಕೆ ಸಂಬಂಧಿಸಿದಂತೆ 2014 ರಲ್ಲಿ ನಟ ದರ್ಶನ್ ನನ್ನ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದರು. ಆಗ ಅವರ ತಾಯಿ ಕಾಂಗ್ರೆಸ್ನಲ್ಲಿದ್ದರು. ನಾನೇಕೆ ದರ್ಶನ್ ವಿರುದ್ಧವಾಗಿ ಸಾಕ್ಷಿ ಹೇಳಬೇಕು. ನಮ್ಮ ನಟರೆಲ್ಲರಿಗೂ ಮಾದರಿಯಾಗಬೇಕು ಎಂದು ಉತ್ತರಿಸಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…