ಮೈಸೂರು

ಧರ್ಮಸ್ಥಳ ಕಬಳಿಸಲು ಸರ್ಕಾರ ಯತ್ನ : ಪ್ರತಾಪ್‌ ಸಿಂಹ ಆರೋಪ

ಮೈಸೂರು : ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಎನ್ನುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ?, ಇದೆಲ್ಲಾ ಧರ್ಮಸ್ಥಳ ಕಬಳಿಸಲು ಮಾಡಿರುವ ಯತ್ನ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಅರೋಪಿ ಎಂದು ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಈಗ ಹುಡುಕುತ್ತಿದೆ ಎಂದರು.

ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವೂದ್ ಇಬ್ರಾಹಿಂ ಥರ ದೊಡ್ಡ ಡಾನಾ? ಹಿಂದೂ ಸಮಾಜ ಪ್ರಜ್ಞಾವಂತಿಕೆ ಕಳೆದು ಕೊಂಡಿದೆ. ಧರ್ಮಸ್ಥಳ ಟಾರ್ಗೆಟ್ ಮಾಡಿರುವುದು ಹಿಂದೂ ಸಮಾಜಕ್ಕೆ ಅರ್ಥವಾಗುತ್ತಿಲ್ಲ. ಧರ್ಮಸ್ಥಳದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸವನ್ನು ಇಸ್ಲಾಂ ಧರ್ಮದ ಯಾವನೋ ಒಬ್ಬ ಮಾಡುತ್ತಿದ್ದಾನೆ. ಅದನ್ನು ಹಿಂದೂಗಳು ನಂಬುತ್ತಿದ್ದಾರೆ. ಆರೋಪಿಯನ್ನು ಮೊದಲೇ ನಿರ್ಧರಿಸಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿರುವ ಮೊದಲ ಪ್ರಕರಣ ಇದು ಎಂದರು.

ಸೌಜನ್ಯ ಪರ ಅರ್ಜಿ ಸಲ್ಲಿಸುವೆ ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಮೂಡಿಸಲು ತನಿಖೆ ಮಾಡಿಸುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಹುಡುಕಾಟಕ್ಕೂ ಸಂಬಂಧವೇ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ ಎಂದರು.

ಅನಾಮಿಕನ ಪೂರ್ವಾಪರ ಮೊದಲು ಬಹಿರಂಗ ಪಡಿಸಲಿ. ಸೌಜನ್ಯ ಪ್ರಕರಣದಲ್ಲಿ ಮೂರು ಸಂಸ್ಥೆಗಳು ತನಿಖೆ ನಡೆಸಿವೆ. ಇನ್ನೂ ಯಾವುದಾದರೂ ತನಿಖೆ ಆಗಬೇಕಿದ್ದರೆ ಸೌಜನ್ಯ ತಾಯಿ ನನಗೆ ಹೇಳಲಿ. ನಾವೇ ಅವರ ಪರ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

55 mins ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

1 hour ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

1 hour ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

2 hours ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

2 hours ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

2 hours ago