ಮೈಸೂರು

ಧರ್ಮಸ್ಥಳ ಕಬಳಿಸಲು ಸರ್ಕಾರ ಯತ್ನ : ಪ್ರತಾಪ್‌ ಸಿಂಹ ಆರೋಪ

ಮೈಸೂರು : ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಎನ್ನುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ?, ಇದೆಲ್ಲಾ ಧರ್ಮಸ್ಥಳ ಕಬಳಿಸಲು ಮಾಡಿರುವ ಯತ್ನ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಅರೋಪಿ ಎಂದು ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಈಗ ಹುಡುಕುತ್ತಿದೆ ಎಂದರು.

ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವೂದ್ ಇಬ್ರಾಹಿಂ ಥರ ದೊಡ್ಡ ಡಾನಾ? ಹಿಂದೂ ಸಮಾಜ ಪ್ರಜ್ಞಾವಂತಿಕೆ ಕಳೆದು ಕೊಂಡಿದೆ. ಧರ್ಮಸ್ಥಳ ಟಾರ್ಗೆಟ್ ಮಾಡಿರುವುದು ಹಿಂದೂ ಸಮಾಜಕ್ಕೆ ಅರ್ಥವಾಗುತ್ತಿಲ್ಲ. ಧರ್ಮಸ್ಥಳದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸವನ್ನು ಇಸ್ಲಾಂ ಧರ್ಮದ ಯಾವನೋ ಒಬ್ಬ ಮಾಡುತ್ತಿದ್ದಾನೆ. ಅದನ್ನು ಹಿಂದೂಗಳು ನಂಬುತ್ತಿದ್ದಾರೆ. ಆರೋಪಿಯನ್ನು ಮೊದಲೇ ನಿರ್ಧರಿಸಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿರುವ ಮೊದಲ ಪ್ರಕರಣ ಇದು ಎಂದರು.

ಸೌಜನ್ಯ ಪರ ಅರ್ಜಿ ಸಲ್ಲಿಸುವೆ ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಮೂಡಿಸಲು ತನಿಖೆ ಮಾಡಿಸುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಹುಡುಕಾಟಕ್ಕೂ ಸಂಬಂಧವೇ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ ಎಂದರು.

ಅನಾಮಿಕನ ಪೂರ್ವಾಪರ ಮೊದಲು ಬಹಿರಂಗ ಪಡಿಸಲಿ. ಸೌಜನ್ಯ ಪ್ರಕರಣದಲ್ಲಿ ಮೂರು ಸಂಸ್ಥೆಗಳು ತನಿಖೆ ನಡೆಸಿವೆ. ಇನ್ನೂ ಯಾವುದಾದರೂ ತನಿಖೆ ಆಗಬೇಕಿದ್ದರೆ ಸೌಜನ್ಯ ತಾಯಿ ನನಗೆ ಹೇಳಲಿ. ನಾವೇ ಅವರ ಪರ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

7 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

37 mins ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

59 mins ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

2 hours ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

2 hours ago

ಹೊರ್ಮುಜ್‌ ಬಿಕ್ಕಟ್ಟು : ಸಂಘರ್ಷ ಶಮನಕ್ಕೆ ಇರಾನ್‌ ಹೊಸ ದಾಳ

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…

2 hours ago