prathap simha
ಮೈಸೂರು : ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಎನ್ನುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ?, ಇದೆಲ್ಲಾ ಧರ್ಮಸ್ಥಳ ಕಬಳಿಸಲು ಮಾಡಿರುವ ಯತ್ನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಅರೋಪಿ ಎಂದು ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಈಗ ಹುಡುಕುತ್ತಿದೆ ಎಂದರು.
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವೂದ್ ಇಬ್ರಾಹಿಂ ಥರ ದೊಡ್ಡ ಡಾನಾ? ಹಿಂದೂ ಸಮಾಜ ಪ್ರಜ್ಞಾವಂತಿಕೆ ಕಳೆದು ಕೊಂಡಿದೆ. ಧರ್ಮಸ್ಥಳ ಟಾರ್ಗೆಟ್ ಮಾಡಿರುವುದು ಹಿಂದೂ ಸಮಾಜಕ್ಕೆ ಅರ್ಥವಾಗುತ್ತಿಲ್ಲ. ಧರ್ಮಸ್ಥಳದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸವನ್ನು ಇಸ್ಲಾಂ ಧರ್ಮದ ಯಾವನೋ ಒಬ್ಬ ಮಾಡುತ್ತಿದ್ದಾನೆ. ಅದನ್ನು ಹಿಂದೂಗಳು ನಂಬುತ್ತಿದ್ದಾರೆ. ಆರೋಪಿಯನ್ನು ಮೊದಲೇ ನಿರ್ಧರಿಸಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿರುವ ಮೊದಲ ಪ್ರಕರಣ ಇದು ಎಂದರು.
ಸೌಜನ್ಯ ಪರ ಅರ್ಜಿ ಸಲ್ಲಿಸುವೆ ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಮೂಡಿಸಲು ತನಿಖೆ ಮಾಡಿಸುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಹುಡುಕಾಟಕ್ಕೂ ಸಂಬಂಧವೇ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ ಎಂದರು.
ಅನಾಮಿಕನ ಪೂರ್ವಾಪರ ಮೊದಲು ಬಹಿರಂಗ ಪಡಿಸಲಿ. ಸೌಜನ್ಯ ಪ್ರಕರಣದಲ್ಲಿ ಮೂರು ಸಂಸ್ಥೆಗಳು ತನಿಖೆ ನಡೆಸಿವೆ. ಇನ್ನೂ ಯಾವುದಾದರೂ ತನಿಖೆ ಆಗಬೇಕಿದ್ದರೆ ಸೌಜನ್ಯ ತಾಯಿ ನನಗೆ ಹೇಳಲಿ. ನಾವೇ ಅವರ ಪರ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇವೆ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…