ಮೈಸೂರು: ಇದಕ್ಕೆಲ್ಲ ನಾನು ಹೆದರುವುದಿಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ ಎಂದು ಮುಡಾ ಹಗರಣ ಸಂಬಂದ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶಭರಿತ ಮಾತುಗಳನ್ನಾಡಿದರು..
ನಗರದಲ್ಲಿ ಶುಕ್ರವಾರ(ಆ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆದವನು ನಾನು. ಸರ್ಕಾರ ಅಸ್ಥಿರಗೊಳಿಸಲು ಅವರೆಲ್ಲಾ ಯತ್ನಿಸುತ್ತಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು? ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರಿ ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ನೋಟಿಸ್ಗೆ ನಾನೇಕೆ ಹೆದರಲಿ. ಅಶೋಕ್ ಹೆದರಿರಬೇಕು ಅವರಿಗೆ ಭಯ ನನಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಟಿ.ಜೆ ಅಹ್ರಾಂ ಒಬ್ಬ ಬ್ಲಾಕ್ ಮೇಲರ್. ಜುಲೈ 26ರ ಬೆಳಿಗ್ಗೆ 11:30 ಕ್ಕೆ ದೂರು ಕೊಡುತ್ತಾನೆ. ಆ ದೂರಿನ ಪರಾಮರ್ಶೆ ಮಾಡದೆ ಆ ದಿನ ಸಂಜೆ ಶೋಕಾಸ್ ನೋಟಿಸ್ ರೆಡಿ ಇದೆ ಬಂದು ಪಡೆದುಕೊಳ್ಳಿ ಎಂದು ನಮ್ಮ ಅಧಿಕಾರಿ ಎಲ್ಕೆ ಅತೀಕ್ ಗೆ ಹೇಳುತ್ತಾರೆ. ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾರ್ದನ ರೆಡ್ಡು ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗೆ ಇಲ್ಲದ ಶೋಕಾಸ್ ನೋಟಿಸ್ನ್ನು ನನಗೆ ತರಾತುರಿಯಲ್ಲಿ ಕೊಟ್ಟಿದ್ದಾರೆ ಎಂದರು.
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…