ಮೈಸೂರು: ಇದಕ್ಕೆಲ್ಲ ನಾನು ಹೆದರುವುದಿಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೆ ತಾನೇ ಹೆದರುವುದು. ರಾಜ್ಯಪಾಲರು ಕೇಂದ್ರ ಬಿಜೆಪಿ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ ಎಂದು ಮುಡಾ ಹಗರಣ ಸಂಬಂದ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶಭರಿತ ಮಾತುಗಳನ್ನಾಡಿದರು..
ನಗರದಲ್ಲಿ ಶುಕ್ರವಾರ(ಆ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆದವನು ನಾನು. ಸರ್ಕಾರ ಅಸ್ಥಿರಗೊಳಿಸಲು ಅವರೆಲ್ಲಾ ಯತ್ನಿಸುತ್ತಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು? ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರಿ ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ನೋಟಿಸ್ಗೆ ನಾನೇಕೆ ಹೆದರಲಿ. ಅಶೋಕ್ ಹೆದರಿರಬೇಕು ಅವರಿಗೆ ಭಯ ನನಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಟಿ.ಜೆ ಅಹ್ರಾಂ ಒಬ್ಬ ಬ್ಲಾಕ್ ಮೇಲರ್. ಜುಲೈ 26ರ ಬೆಳಿಗ್ಗೆ 11:30 ಕ್ಕೆ ದೂರು ಕೊಡುತ್ತಾನೆ. ಆ ದೂರಿನ ಪರಾಮರ್ಶೆ ಮಾಡದೆ ಆ ದಿನ ಸಂಜೆ ಶೋಕಾಸ್ ನೋಟಿಸ್ ರೆಡಿ ಇದೆ ಬಂದು ಪಡೆದುಕೊಳ್ಳಿ ಎಂದು ನಮ್ಮ ಅಧಿಕಾರಿ ಎಲ್ಕೆ ಅತೀಕ್ ಗೆ ಹೇಳುತ್ತಾರೆ. ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾರ್ದನ ರೆಡ್ಡು ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗೆ ಇಲ್ಲದ ಶೋಕಾಸ್ ನೋಟಿಸ್ನ್ನು ನನಗೆ ತರಾತುರಿಯಲ್ಲಿ ಕೊಟ್ಟಿದ್ದಾರೆ ಎಂದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…