ಎಚ್.ಡಿ.ಕೋಟೆ: ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಹಾಲನ್ನು ನೀಡುತ್ತಿದೆ. ಆದರೆ ಇಲ್ಲೊಬ್ಬ ಶಿಕ್ಷಕ ಮಕ್ಕಳಿಗೆ ನೀಡುತ್ತಿದ್ದ ಹಾಲಿನ ಪುಡಿ ಪ್ಯಾಕೇಟ್ನ್ನು ಮನೆಗೆ ಕೊಂಡೊಯ್ಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಹೌದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಗಣೇಶ್ ಎಂಬಾತ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.
ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರ ಉಚಿತವಾಗಿ ನೀಡುವ ಒಟ್ಟು 10 ಹಾಲಿನ ಪುಡಿಗಳನ್ನು ಶಿಕ್ಷಕ ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿದ್ದ. ಈ ವೇಳೆ ಅನುಮಾನಗೊಂಡ ಸಾರ್ವಜನಿಕರು ಬೈಕ್ ಪರಿಶೀಲನೆ ನಡೆಸಿದಾಗ ವಿಷಯ ಗೊತ್ತಾಗಿದೆ.
ಈ ವೇಳೆ ಹಾಲಿನ ಪ್ಯಾಕೇಟ್ ಅವಧಿ ಮೀರಿದ್ದರಿಂದ ಮನೆಗೆ ಕೊಡೊಯ್ಯುತ್ತಿದ್ದೆ ಎಂದು ಶಿಕ್ಷಕ ಸ್ಪಷ್ಟೀಕರಣ ಕೊಡಲು ಮುಂದಾಗಿದ್ದನು. ಆದರೆ ಹಾಲಿನ ಪ್ಯಾಕೇಟ್ಗಳನ್ನು ಪರಿಶೀಲನೆ ನಡೆಸಿದಾಗ ಬರುವ ಡಿಸೆಂಬರ್ವರೆಗೂ ಹಾಲಿನ ಪುಡಿ ಬಳಕೆ ಮಾಡಲು ಅವಧಿ ಇರುವುದು ಖಾತರಿಯಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಹಾಲಿನ ಪುಡಿಗಳ ಸಮೇತ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…