ಮೈಸೂರು: ಮುಂದಿನ ಹತ್ತು ವರ್ಷವಾದ್ರೂ ನಮ್ಮ ಸರ್ಕಾರ ಅಲ್ಲಾಡಿಸೋಕೆ ಆಗಲ್ಲ. ಸರ್ಕಾರ ಉರುಳಿಸುತ್ತೇವೆ ಎನ್ನುವುದು ನಿಮ್ಮ ಭ್ರಮೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮೈತ್ರಿ ಪಕ್ಷದ ನಾಯಕರ ವಿರುದ್ಧ ಗುಡುಗಿದರು.
ಶುಕ್ರವಾರ(ಆ.9) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜ್ಯದ ಜನರು ಹಾಗೂ ಸಂವಿಧಾನದ ರಕ್ಷಣೆಗಾಗಿ ನಾವು ಈ ಜನಾಂದೋಲನವನ್ನು ನಡೆಸುತ್ತಿದ್ದೇವೆ. ಬಿಜೆಪಿ-ಜೆಡಿಎಸ್ನವರದ್ದು ಪಾಪವಿಮೋಚನೆಯ ಯಾತ್ರೆಯಾಗಿದೆ ಎಂದರು.
ನಮ್ಮದು ಅಧರ್ಮಿಗಳ ವಿರುದ್ಧದ ಧರ್ಮಯುದ್ಧವಾಗಿದೆ. ಅಸತ್ಯದ ವಿರುದ್ಧದ ಸತ್ಯದ ಹೋರಾಟವಾಗಿದೆ. ಈ ಸರ್ಕಾರವನ್ನು ಹತ್ತು ತಿಂಗಳಲ್ಲಿ ತೆಗೆದು ಹಾಕುತ್ತೇವೆ ಎಂದು ಹೊರಟಿರುವವರ ವಿರುದ್ಧ ಬಡವರಿಗಾಗಿ ನಾವು ಹೋರಾಡುತ್ತಿದ್ದೇವೆ ಎಂದು ಹೇಳಿದರು.
ಹೇ.. ಮಿಸ್ಟರ್ ಕುಮಾರಸ್ವಾಮಿ, ಅಶೋಕ್, ವಿಜಯೇಂದ್ರ ನಿಮಗೆ ಸಿಎಂ ರಾಜೀನಾಮೆ ಬೇಕಾ.. ಈ ಬಂಡೆ ಸಿಎಂ ಸಿದ್ದರಾಮಯ್ಯ ಹಿಂದೆ ಇದ್ದಾನೆ… ನನ್ನೊಂದಿಗೆ 136ಜನ ಶಾಸಕರು ಇದ್ದಾರೆ. ನಾವೆಲ್ಲರೂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ನಿಮ್ಮ ಕೈಯಲ್ಲಿ ಏನು ಮಾಡಲಾಗುವುದಿಲ್ಲ ಎಂದು ಗುಡುಗಿದರು.
ನನ್ನ ನೇತೃತ್ವದಲ್ಲಿ 136 ಸೀಟುಗಳನ್ನು ಪಡೆದಿದ್ದೇವೆ. ಅದೇ ಕುಮಾರಸ್ವಾಮಿ ನೇತೃತ್ವದಲ್ಲಿ 19 ಸೀಟು ಬಂದಿದೆ. ಈ ಸರ್ಕಾರ ತೆಗೆಯಲು ಏನೇ ಕುತಂತ್ರ ಮಾಡಿದರೂ ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೆಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…
ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…