ಮೈಸೂರು: ಮುಂದಿನ ಹತ್ತು ವರ್ಷವಾದ್ರೂ ನಮ್ಮ ಸರ್ಕಾರ ಅಲ್ಲಾಡಿಸೋಕೆ ಆಗಲ್ಲ. ಸರ್ಕಾರ ಉರುಳಿಸುತ್ತೇವೆ ಎನ್ನುವುದು ನಿಮ್ಮ ಭ್ರಮೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮೈತ್ರಿ ಪಕ್ಷದ ನಾಯಕರ ವಿರುದ್ಧ ಗುಡುಗಿದರು.
ಶುಕ್ರವಾರ(ಆ.9) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜ್ಯದ ಜನರು ಹಾಗೂ ಸಂವಿಧಾನದ ರಕ್ಷಣೆಗಾಗಿ ನಾವು ಈ ಜನಾಂದೋಲನವನ್ನು ನಡೆಸುತ್ತಿದ್ದೇವೆ. ಬಿಜೆಪಿ-ಜೆಡಿಎಸ್ನವರದ್ದು ಪಾಪವಿಮೋಚನೆಯ ಯಾತ್ರೆಯಾಗಿದೆ ಎಂದರು.
ನಮ್ಮದು ಅಧರ್ಮಿಗಳ ವಿರುದ್ಧದ ಧರ್ಮಯುದ್ಧವಾಗಿದೆ. ಅಸತ್ಯದ ವಿರುದ್ಧದ ಸತ್ಯದ ಹೋರಾಟವಾಗಿದೆ. ಈ ಸರ್ಕಾರವನ್ನು ಹತ್ತು ತಿಂಗಳಲ್ಲಿ ತೆಗೆದು ಹಾಕುತ್ತೇವೆ ಎಂದು ಹೊರಟಿರುವವರ ವಿರುದ್ಧ ಬಡವರಿಗಾಗಿ ನಾವು ಹೋರಾಡುತ್ತಿದ್ದೇವೆ ಎಂದು ಹೇಳಿದರು.
ಹೇ.. ಮಿಸ್ಟರ್ ಕುಮಾರಸ್ವಾಮಿ, ಅಶೋಕ್, ವಿಜಯೇಂದ್ರ ನಿಮಗೆ ಸಿಎಂ ರಾಜೀನಾಮೆ ಬೇಕಾ.. ಈ ಬಂಡೆ ಸಿಎಂ ಸಿದ್ದರಾಮಯ್ಯ ಹಿಂದೆ ಇದ್ದಾನೆ… ನನ್ನೊಂದಿಗೆ 136ಜನ ಶಾಸಕರು ಇದ್ದಾರೆ. ನಾವೆಲ್ಲರೂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ನಿಮ್ಮ ಕೈಯಲ್ಲಿ ಏನು ಮಾಡಲಾಗುವುದಿಲ್ಲ ಎಂದು ಗುಡುಗಿದರು.
ನನ್ನ ನೇತೃತ್ವದಲ್ಲಿ 136 ಸೀಟುಗಳನ್ನು ಪಡೆದಿದ್ದೇವೆ. ಅದೇ ಕುಮಾರಸ್ವಾಮಿ ನೇತೃತ್ವದಲ್ಲಿ 19 ಸೀಟು ಬಂದಿದೆ. ಈ ಸರ್ಕಾರ ತೆಗೆಯಲು ಏನೇ ಕುತಂತ್ರ ಮಾಡಿದರೂ ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೆಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…