ಮೈಸೂರು: ಮುಂದಿನ ಹತ್ತು ವರ್ಷವಾದ್ರೂ ನಮ್ಮ ಸರ್ಕಾರ ಅಲ್ಲಾಡಿಸೋಕೆ ಆಗಲ್ಲ. ಸರ್ಕಾರ ಉರುಳಿಸುತ್ತೇವೆ ಎನ್ನುವುದು ನಿಮ್ಮ ಭ್ರಮೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮೈತ್ರಿ ಪಕ್ಷದ ನಾಯಕರ ವಿರುದ್ಧ ಗುಡುಗಿದರು.
ಶುಕ್ರವಾರ(ಆ.9) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜ್ಯದ ಜನರು ಹಾಗೂ ಸಂವಿಧಾನದ ರಕ್ಷಣೆಗಾಗಿ ನಾವು ಈ ಜನಾಂದೋಲನವನ್ನು ನಡೆಸುತ್ತಿದ್ದೇವೆ. ಬಿಜೆಪಿ-ಜೆಡಿಎಸ್ನವರದ್ದು ಪಾಪವಿಮೋಚನೆಯ ಯಾತ್ರೆಯಾಗಿದೆ ಎಂದರು.
ನಮ್ಮದು ಅಧರ್ಮಿಗಳ ವಿರುದ್ಧದ ಧರ್ಮಯುದ್ಧವಾಗಿದೆ. ಅಸತ್ಯದ ವಿರುದ್ಧದ ಸತ್ಯದ ಹೋರಾಟವಾಗಿದೆ. ಈ ಸರ್ಕಾರವನ್ನು ಹತ್ತು ತಿಂಗಳಲ್ಲಿ ತೆಗೆದು ಹಾಕುತ್ತೇವೆ ಎಂದು ಹೊರಟಿರುವವರ ವಿರುದ್ಧ ಬಡವರಿಗಾಗಿ ನಾವು ಹೋರಾಡುತ್ತಿದ್ದೇವೆ ಎಂದು ಹೇಳಿದರು.
ಹೇ.. ಮಿಸ್ಟರ್ ಕುಮಾರಸ್ವಾಮಿ, ಅಶೋಕ್, ವಿಜಯೇಂದ್ರ ನಿಮಗೆ ಸಿಎಂ ರಾಜೀನಾಮೆ ಬೇಕಾ.. ಈ ಬಂಡೆ ಸಿಎಂ ಸಿದ್ದರಾಮಯ್ಯ ಹಿಂದೆ ಇದ್ದಾನೆ… ನನ್ನೊಂದಿಗೆ 136ಜನ ಶಾಸಕರು ಇದ್ದಾರೆ. ನಾವೆಲ್ಲರೂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ನಿಮ್ಮ ಕೈಯಲ್ಲಿ ಏನು ಮಾಡಲಾಗುವುದಿಲ್ಲ ಎಂದು ಗುಡುಗಿದರು.
ನನ್ನ ನೇತೃತ್ವದಲ್ಲಿ 136 ಸೀಟುಗಳನ್ನು ಪಡೆದಿದ್ದೇವೆ. ಅದೇ ಕುಮಾರಸ್ವಾಮಿ ನೇತೃತ್ವದಲ್ಲಿ 19 ಸೀಟು ಬಂದಿದೆ. ಈ ಸರ್ಕಾರ ತೆಗೆಯಲು ಏನೇ ಕುತಂತ್ರ ಮಾಡಿದರೂ ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೆಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…