ಮೈಸೂರು

ನಕ್ಸಲಿಂ ತೊಡೆದು ಹಾಕುವುದು ಸರ್ಕಾರದ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ನಕ್ಸಲಿಂ ಅನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಹಾಗೂ ನಕ್ಸಲರ ಶರಣಾಗತಿಯ ಬಗ್ಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೋರಾಟುಗಳು ಸಂವಿಧಾನತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ಅವರೂ ಹೇಳಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ಕೋರುವುದಾಗಿ ತಿಳಿಸಿದರು.

ಅಂಬೇಡ್ಕರ್ ರವರ ಕುರಿತ ಕಾಂಗ್ರೆಸ್ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ
ಕಾಂಗ್ರೆಸ್ ಸರ್ಕಾರಕ್ಕೆ ಅಂಬೇಡ್ಕರ್ ರವರ ಕುರಿತ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ, ಸಂವಿಧಾನದ ರಕ್ಷಣೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ, ಅದರ ಆಶಯಗಳ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ತಿಳಿಸಿದರು.

ಡಾ.ಅಂಬೇಡ್ಕರ್ ರವರ ಕುರಿತು ಬಿಜೆಪಿಯವರ ಅಗೌರವದ ಹೇಳಿಕೆ
ಡಾ.ಅಂಬೇಡ್ಕರ್ ರವರ ಜಪ ಮಾಡಬಾರದೆಂದು ಹೇಳುವ ಕೇಂದ್ರ ಸಚಿವ ಅಮಿತ್ ಶಾ ಅವರು ದಲಿತರ ಮನೆಗಳಿಗೆ ಭೇಟಿ ನೀಡಿ, ಡಾ.ಅಂಬೇಡ್ಕರ್ ಅಭಿಯಾನ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಡಾ. ಅಂಬೇಡ್ಕರ್ ಅವರ ಕುರಿತ ಅವರ ಹೇಳಿಕೆ, ಬಿಜೆಪಿಯವರಿಗೆ ಅಂಬೇಡ್ಕರ್ ರವರ ಮೇಲಿನ ಅಗೌರವವನ್ನು ತೋರಿಸುತ್ತದೆ. ಕಾಂಗ್ರೆಸ್ ಪಕ್ಷದವರ ಕಾಲದಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಅವರೇ ರಚಿಸಿದ್ದರು. ವಾಜಪೇಯಿಯವರ ಸರ್ಕಾರವಿದ್ದ ಸಂದರ್ಭದಲ್ಲಿ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು. ಸಂವಿಧಾನ ಬದಲಾವಣೆಗಾಗಿಯೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಯ ಅನೇಕ ಸಚಿವರು ಹೇಳಿಕೆ ನೀಡಿದ್ದರು. ಆರ್ ಎಸ್ ಎಸ್ ನ ಪ್ರಮುಖರು ಸಂವಿಧಾನವನ್ನು ವಿರೋಧಿಸಿದ್ದರು ಎಂದರು.

ಕೇಂದ್ರದಲ್ಲಿ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಿದೆ
ನವದೆಹಲಿಯಲ್ಲಿ ಎಂಎಸ್ ಪಿ ಬೇಡಿಕೆ ಸಂಬಂಧ ರೈತರ ಬಹಳ ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಅವರ ನ್ಯಾಯಬದ್ಧ ಬೇಡಿಕೆಗೆ ಸ್ಪಂದಿಸುತ್ತಿಲ್ಲವೆಂಬ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ರೈತರ ಪರವಾದ ಸರ್ಕಾರವಲ್ಲ. ಬೆಳೆಗಳಿಗೆ ಎಂಎಸ್ ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಾಗಿದೆ. ನೂರಾರು ರೈತರು ಪ್ರತಿಭಟನೆಯನ್ನು ಪ್ರಾಣ ಕಳೆದುಕೊಂಡಿದ್ದರೂ ಸಹ ರೈತರ ಬೇಡಿಕೆಗೆ ಮಣಿಯುತ್ತಿಲ್ಲ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

2 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

7 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

7 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

7 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

7 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

10 hours ago