ಮೈಸೂರು

ಮೈಸೂರಿನಲ್ಲಿ ಅದ್ಧೂರಿ ಕನಕದಾಸ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಭಕ್ತ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.

ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಆಯೋಜಿಸಿದ್ದ ಮೆರವಣಿಗೆಗೆ ಶಾಸಕ ಜಿ.ಟಿ.ದೇವೇಗೌಡ ಅವರು ಚಾಲನೆ ನೀಡಿದರು.

ಬೆಳ್ಳಿ ರಥದಲ್ಲಿ ಕನಕದಾಸರ ಪ್ರತಿಮೆ ಇಟ್ಟು ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ರಸ್ತೆಯುದ್ಧಕ್ಕೂ ಸಾಗಿದ ವಿವಿಧ ಕಲಾತಂಡಗಳು, ಟ್ಯಾಬ್ಲೋಗಳು ಎಲ್ಲರ ಗಮನ ಸೆಳೆದವು. ಜಿಲ್ಲಾಡಳಿತ ಹಾಗೂ ಕನಕದಾಸ ಜಯಂತಿ ಆಚರಣೆ ಸಮಿತಿಯಿಂದ ಆಯೋಜಿಸಿರುವ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ, ಮಂಜೇಗೌಡ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮರೀಗೌಡ, ಸುಬ್ರಹ್ಮಣ್ಯ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

23 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

23 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

23 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

23 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

23 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

23 hours ago