ಮೈಸೂರು

ಡಿಸೆಂಬರ್‌ ಅಂತ್ಯಕ್ಕೆ ಗ್ರೇಟರ್‌ ಮೈಸೂರು ಚಾಲ್ತಿ : ನಗರಾಭಿವೃದ್ಧ ಸಚಿವ ಸುರೇಶ್‌

ಮೈಸೂರು : 4 ಪಟ್ಟಣ ಪಂಚಾಯಿತಿಗಳು, 1 ನಗರಸಭೆ, 8 ಗ್ರಾಮ ಪಂಚಾಯಿತಿಗಳ ಪ್ರದೇಶಗಳನ್ನು ಸೇರಿಸಿಕೊಂಡು ಗ್ರೇಟರ್ ಮೈಸೂರು ರಚನೆ ಮಾಡಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.

ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಅವರು, ನಗರಪಾಲಿಕೆಯು ಪ್ರಸ್ತುತ 86 ಚ.ಕಿ.ಮೀ ವಿಸ್ತೀರ್ಣ ಹೊಂದಿದ್ದು, ಗ್ರೇಟರ್ ಮೈಸೂರು ರಚನೆಯಾದರೆ 333.46 ಚ.ಕಿ.ಮೀ ವಿಸ್ತೀರ್ಣವನ್ನು ಹೊಂದಲಿದೆ. 2011ರ ಜನಗಣತಿ ಪ್ರಕಾರ 11,19,705 ಜನಸಂಖ್ಯೆ ಇದ್ದು, 2025ರ ಯೋಜಿತ 14.16,671 ಜನಸಂಖ್ಯೆಯನ್ನು ಹೊಂದಿದ್ದು, ಅಂದಾಜು 4 ಲಕ್ಷ ಜನಸಂಖ್ಯೆ ಹೆಚ್ಚಳವಾಗಲಿದೆ. ಮುಂದಿನ ದಿನಗಳಲ್ಲಿ ಕಸ ನಿರ್ವಹಣೆ, ಕುಡಿಯುವ ನೀರು, ಮೂಲಸೌಕರ್ಯ, ವಿದ್ಯುತ್ ವ್ಯವಸ್ಥೆ, ಸಂಪರ್ಕ ಒದಗಿಸಲಾಗುತ್ತದೆ. ಈ ಪ್ರಸ್ತಾವನೆಯನ್ನು ಮುಂದಿನ ಅಥವಾ ನಂತರದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದರು.

ಇದನ್ನೂ ಓದಿ:-ಎಚ್‌.ಡಿ ಕೋಟೆ | ಸಾಲ ಭಾದೆ : ಯುವ ರೈತ ಆತ್ಮಹತ್ಯೆ

ಸಚಿವ ಸಂಪುಟ ಸಭೆಯಲ್ಲಿ ಗ್ರೇಟರ್ ಮೈಸೂರು ರಚನೆಗೆ ಅನುಮೋದನೆಯಾದ ಮೇಲೆ ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ರೀತಿಯ ಪ್ರಕ್ರಿಯೆಗಳನ್ನು ಮುಗಿಸಿ ಚಾಲ್ತಿ ಬರುವಂತೆ ನೋಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ನುಡಿದರು.

ಗ್ರೇಟರ್ ಮೈಸೂರು ಸೇರಿದಂತೆ ಮೈಸೂರು ನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸಿಎಂ ಅಧ್ಯಕ್ಷತೆಯಲ್ಲಿ ಎರಡು ಸಮಿತಿಗಳು ರಚನೆಯಾಗಲಿವೆ. ಮೊದಲನೆಯದಾಗಿ ಮೈಸೂರು ನಗರಪಾಲಿಕೆಯ ಅಭಿವೃದ್ಧಿ ಸಂಬಂಧ ಸಿಎಂ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಉಪಾಧ್ಯಕ್ಷರಾಗಿರುವ ಸಮಿತಿಯಲ್ಲಿ ಶಾಸಕರು ಮತ್ತು ವಿಧಾನ ಪರಿಷತ್‌ನ ಸದಸ್ಯರು ಸದಸ್ಯರಾಗಲಿದ್ದು, ಗ್ರೇಟರ್ ಮೈಸೂರು ರಚನೆ ಸಂಬಂಧ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

40 mins ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

2 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

3 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

3 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

8 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

8 hours ago