ಮೈಸೂರು

ಮೈಸೂರಿನಲ್ಲಿ ಗೃಹಲಕ್ಷ್ಮಿಯೋಜನೆಗೆ ಚಾಲನೆ : ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಮೈಸೂರು : ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ ಅವರು ಇಂದು ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಮಡಿಕೇರಿ ಜಿಲ್ಲೆಗಳಿಂದ 1.5 ಲಕ್ಷ ಫಲಾನುಭವಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಸಂಬಂಧ ವಾಹನ ನಿಲುಗಡೆ ಸೂಕ್ತವಾದ ವ್ಯವಸ್ಧೆ ಮಾಡಬೇಕು. ಕಾರ್ಯಕ್ರಮದಲ್ಲಿ ವ್ಯವಸ್ಧಿತವಾದ ಆಸನದ ವ್ಯವಸ್ಧೆ, ಊಟದ ವ್ಯವಸ್ಧೆ , ಕುಡಿಯುವ ನೀರಿನ ವ್ಯವಸ್ಧೆ ಸಮರ್ಪಕವಾಗಿ ಮಾಡಬೇಕು ಎಂದು ತಿಳಿಸಿದರು.

ವೇದಿಕೆ ನಿರ್ಮಾಣ, ಮೊಬೈಲ್ ಶೌಚಾಲಯ, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ವ್ಯವಸ್ಧೆ ಹಾಗೂ ವೈದ್ಯರ ತಂಡ ನಿಯೋಜಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಅರ್ಷದ್ ಉರ್ ರೆಹಮಾನ್ ಷರೀಫ್, ಮೂಡಾ ಆಯುಕ್ತರಾದ ದಿನೇಶ್ ಕುಮಾರ್, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾಹ್ನವಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

lokesh

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

2 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

2 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

2 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

2 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

3 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

3 hours ago