ಮೈಸೂರು : ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ ಗೃಹ ಲಕ್ಷ್ಮಿ ಯೋಜನೆ ಜಾರಿ ಕಾರ್ಯಕ್ರಮವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಿದೆ. ನಗರದ ಮಹಾರಾಜ ಕಾಲೇಜು ಮೈದಾನ ಕಾರ್ಯಕ್ರಮಕ್ಕಾಗಿ ಮದುವಣಗಿತ್ತಿಯಂತೆ ಸಜ್ಜಾಗಿದೆ.
ಈಗಾಗಲೇ ವರದಿಯಾಗಿರುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಹಾಗಾಗೇ, ನಗರದ ಹೆಚ್ಚಿನ ಭಾಗಗಳಲ್ಲಿ ಭಾರೀ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ. ಮಹಾರಾಜಾ ಕಾಲೇಜು ಸುತ್ತಮುತ್ತ ಎಲ್ಲಾ ಬಗೆಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಆ್ಯಂಟಿ ಬಾಂಬ್ ಸ್ಕ್ವ್ಯಾಡ್, ನಾಯಿಯೊಂದಿಗೆ ಮೈದಾನದ ಗಸ್ತು ತಿರುಗುತ್ತಿದ್ದಾರೆ. ಮೈದಾನದ ಪ್ರವೇಶ ದ್ವಾರಗಳಲ್ಲಿ ಮೆಟಲ್ ಡಿಟೆಕ್ಟರ್ ಗಳನ್ನು ಅಳವಡಿಸಲಾಗಿದೆ. ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…