Mysore
31
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಮೈಸೂರಲ್ಲಿ ಗೃಹಲಕ್ಷ್ಮಿ : ವಾಹನಸವಾರರಿಗೆ ಕಿರಿಕಿರಿ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳಲ್ಲಿ ನಾಲ್ಕನೇ ಗ್ಯಾರೆಂಟಿಯಾದ ಗೃಹಲಕ್ಷ್ಮಿಯೋಜನೆಗೆ ಇಂದು ಚಾಲನೆ ನೀಡಲಾಗುತ್ತದೆ. ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದ್ದು ರಾಜ್ಯಸಭೆ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ​ ಖರ್ಗೆ ಮತ್ತು ಸಂಸದ ರಾಹುಲ್​​ ಗಾಂಧಿ ಯೋಜನೆ ಚಾಲನೆ ನೀಡಲಿದ್ದಾರೆ. ​

ಈ ಬೃಹತ್​ ಕಾರ್ಯಕ್ರಮದಿಂದ ಟ್ರಾಫಿಕ್ ಜಾಮ್ ಆಗದಂತೆ ತಡೆಯಲು ಸುತ್ತಮತ್ತಲಿನ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಬದಲಿಮಾರ್ಗ ಸೂಚಿಸಲಾಗಿದೆ. ಆದರೆ ಸಂಚಾರಿ ಮಾರ್ಗ ಬದಲಾಗಿರುವುದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

ನಾವು ಬದಲಿ ರಸ್ತೆಯನ್ನು ಬಳಸಿಕೊಂಡು ಹೋಗಲು ಸಾಧ್ಯವಿಲ್ಲ ಎಂದು ಪೊಲೀಸರ ಜೊತೆ ವಾಗ್ವಾದ ಮಾಡುತ್ತಿದ್ದಾರೆ. ಈ ವೇಳೆ ಪೊಲೀಸರು ಸವಾರರಿಗೆ ಮನವೊಲಿಸಿ ಬೇರೆ ಮಾರ್ಗದಲ್ಲಿ ಕಳುಹಿಸುವಷ್ಟರಲ್ಲಿ ಪೊಲೀಸರು ಹೈರಾಣ ಆಗುತ್ತಿದ್ದಾರೆ. ಇನ್ನು ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ಜಿಲ್ಲಾ ಸಂಚಾರ ಪೊಲೀಸ್​​ ಇಲಾಖೆ ನಿರ್ಬಂಧಿಸಿ ಮುಂಚೆಯೇ ಆದೇಶ ಹೊರಡಿಸಿತ್ತು. ಆದರೂ ಕೂಡ ಜನರು ಸಂಚರಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್​ ಸೇರಿದಂತೆ ಎಲ್ಲ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ. ಜೊತೆಗೆ ಮಹಾರಾಜ ಕಾಲೇಜು ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್​​ಗೆ ಮೈಸೂರು ನಗರದ ವಿವಿಧ ಮೈದಾನಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಮಾಹಿತಿ ನೀಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!