ಮೈಸೂರು

ಮೈಸೂರಲ್ಲಿ ಗೃಹಲಕ್ಷ್ಮಿ : ವಾಹನಸವಾರರಿಗೆ ಕಿರಿಕಿರಿ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳಲ್ಲಿ ನಾಲ್ಕನೇ ಗ್ಯಾರೆಂಟಿಯಾದ ಗೃಹಲಕ್ಷ್ಮಿಯೋಜನೆಗೆ ಇಂದು ಚಾಲನೆ ನೀಡಲಾಗುತ್ತದೆ. ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದ್ದು ರಾಜ್ಯಸಭೆ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ​ ಖರ್ಗೆ ಮತ್ತು ಸಂಸದ ರಾಹುಲ್​​ ಗಾಂಧಿ ಯೋಜನೆ ಚಾಲನೆ ನೀಡಲಿದ್ದಾರೆ. ​

ಈ ಬೃಹತ್​ ಕಾರ್ಯಕ್ರಮದಿಂದ ಟ್ರಾಫಿಕ್ ಜಾಮ್ ಆಗದಂತೆ ತಡೆಯಲು ಸುತ್ತಮತ್ತಲಿನ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಬದಲಿಮಾರ್ಗ ಸೂಚಿಸಲಾಗಿದೆ. ಆದರೆ ಸಂಚಾರಿ ಮಾರ್ಗ ಬದಲಾಗಿರುವುದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

ನಾವು ಬದಲಿ ರಸ್ತೆಯನ್ನು ಬಳಸಿಕೊಂಡು ಹೋಗಲು ಸಾಧ್ಯವಿಲ್ಲ ಎಂದು ಪೊಲೀಸರ ಜೊತೆ ವಾಗ್ವಾದ ಮಾಡುತ್ತಿದ್ದಾರೆ. ಈ ವೇಳೆ ಪೊಲೀಸರು ಸವಾರರಿಗೆ ಮನವೊಲಿಸಿ ಬೇರೆ ಮಾರ್ಗದಲ್ಲಿ ಕಳುಹಿಸುವಷ್ಟರಲ್ಲಿ ಪೊಲೀಸರು ಹೈರಾಣ ಆಗುತ್ತಿದ್ದಾರೆ. ಇನ್ನು ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ಜಿಲ್ಲಾ ಸಂಚಾರ ಪೊಲೀಸ್​​ ಇಲಾಖೆ ನಿರ್ಬಂಧಿಸಿ ಮುಂಚೆಯೇ ಆದೇಶ ಹೊರಡಿಸಿತ್ತು. ಆದರೂ ಕೂಡ ಜನರು ಸಂಚರಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್​ ಸೇರಿದಂತೆ ಎಲ್ಲ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ. ಜೊತೆಗೆ ಮಹಾರಾಜ ಕಾಲೇಜು ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್​​ಗೆ ಮೈಸೂರು ನಗರದ ವಿವಿಧ ಮೈದಾನಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಮಾಹಿತಿ ನೀಡಿದ್ದರು.

lokesh

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

44 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

54 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago