ಮೈಸೂರು

ಮೈಸೂರಲ್ಲಿ ಗೃಹಲಕ್ಷ್ಮಿ : ವಾಹನಸವಾರರಿಗೆ ಕಿರಿಕಿರಿ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳಲ್ಲಿ ನಾಲ್ಕನೇ ಗ್ಯಾರೆಂಟಿಯಾದ ಗೃಹಲಕ್ಷ್ಮಿಯೋಜನೆಗೆ ಇಂದು ಚಾಲನೆ ನೀಡಲಾಗುತ್ತದೆ. ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದ್ದು ರಾಜ್ಯಸಭೆ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ​ ಖರ್ಗೆ ಮತ್ತು ಸಂಸದ ರಾಹುಲ್​​ ಗಾಂಧಿ ಯೋಜನೆ ಚಾಲನೆ ನೀಡಲಿದ್ದಾರೆ. ​

ಈ ಬೃಹತ್​ ಕಾರ್ಯಕ್ರಮದಿಂದ ಟ್ರಾಫಿಕ್ ಜಾಮ್ ಆಗದಂತೆ ತಡೆಯಲು ಸುತ್ತಮತ್ತಲಿನ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಬದಲಿಮಾರ್ಗ ಸೂಚಿಸಲಾಗಿದೆ. ಆದರೆ ಸಂಚಾರಿ ಮಾರ್ಗ ಬದಲಾಗಿರುವುದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

ನಾವು ಬದಲಿ ರಸ್ತೆಯನ್ನು ಬಳಸಿಕೊಂಡು ಹೋಗಲು ಸಾಧ್ಯವಿಲ್ಲ ಎಂದು ಪೊಲೀಸರ ಜೊತೆ ವಾಗ್ವಾದ ಮಾಡುತ್ತಿದ್ದಾರೆ. ಈ ವೇಳೆ ಪೊಲೀಸರು ಸವಾರರಿಗೆ ಮನವೊಲಿಸಿ ಬೇರೆ ಮಾರ್ಗದಲ್ಲಿ ಕಳುಹಿಸುವಷ್ಟರಲ್ಲಿ ಪೊಲೀಸರು ಹೈರಾಣ ಆಗುತ್ತಿದ್ದಾರೆ. ಇನ್ನು ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ಜಿಲ್ಲಾ ಸಂಚಾರ ಪೊಲೀಸ್​​ ಇಲಾಖೆ ನಿರ್ಬಂಧಿಸಿ ಮುಂಚೆಯೇ ಆದೇಶ ಹೊರಡಿಸಿತ್ತು. ಆದರೂ ಕೂಡ ಜನರು ಸಂಚರಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್​ ಸೇರಿದಂತೆ ಎಲ್ಲ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ. ಜೊತೆಗೆ ಮಹಾರಾಜ ಕಾಲೇಜು ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್​​ಗೆ ಮೈಸೂರು ನಗರದ ವಿವಿಧ ಮೈದಾನಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಮಾಹಿತಿ ನೀಡಿದ್ದರು.

lokesh

Recent Posts

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

12 mins ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

56 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

1 hour ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

7 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

7 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

10 hours ago