ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಈ ಬಾರಿಯೂ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗಲಿದೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳೀದ್ದಾರೆ.
ಆ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಲಿದೆ ಎಂಬ ಎಲ್ಲಾ ಊಹಾಪೋಹಗಳಿಗೆ ಜಿಟಿ ದೇವೆಗೌಡ ಸ್ಪಷ್ಟನೆ ನೀಡಿದ್ದಾರೆ.
ಈ ಬಾರಿ ನೂರಕ್ಕೆ ನೂರರಷ್ಟು ಪ್ರತಿಶತ ಪ್ರತಾಪ್ ಸಿಂಹರಿಗೆ ಟಿಕೆಟ್ ಸಿಗಲಿದೆ. ತುಳಸಿ ದಾಸಪ್ಪರ ನಂತರ ಮೈಸೂರಿನಿಂದ ಒಕ್ಕಲಿಗರೊಬ್ಬರು ಸಂಸದರಾಗಿದ್ದಾರೆ. ನಾನು ಕಳೆದೆರೆಡು ಚುನಾವಣೆಯಲ್ಲಿ ಪ್ರತಾಪ್ರಿಗೆ ಬೆಂಬಲ ಸೂಚಿಸಿದ್ದೆ. ಈ ಬಾರಿಯೂ ಅವರಿಗೆ ನಮ್ಮ ಬೆಂಬಲ ಇರಲಿದೆ.
ಕಳೆದ ಹತ್ತು ವರ್ಷಗಳಲ್ಲಿ ಪ್ರತಾಪ್ ಸಿಂಹ ಸಂಸದರಾಗಿ ಹಲವಾರು ಪ್ರಗತಿ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಶಾಸಕ ಜಿ.ಟಿ ದೇವೇಗೌಡ ಪ್ರತಾಪ್ ಸಿಂಹ ಪರ ಬ್ಯಾಟಿಂಗ್ ಮಾಡಿದ್ದಾರೆ.
ಇನ್ನು ಜಿಟಿಡಿ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳಿಗೆ ಸಂಬಂಧಿಸಿದಂತೆ ಅಂತಹ ಯಾವುದೇ ಸಂದರ್ಭ ಈವರೆಗೆ ಬಂದಿಲ್ಲ, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ. ನಮ್ಮ ಗುರಿ ಕೇವಲ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…