ಮೈಸೂರು

ಈ ಬಾರಿಯೂ ಪ್ರತಾಪ್‌ ಸಿಂಹಗೆ ಲೋಕ ಟಿಕೆಟ್‌: ಜಿಟಿ ದೇವೇಗೌಡ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಈ ಬಾರಿಯೂ ಸಂಸದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಸಿಗಲಿದೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳೀದ್ದಾರೆ.

ಆ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಕೈತಪ್ಪಲಿದೆ ಎಂಬ ಎಲ್ಲಾ ಊಹಾಪೋಹಗಳಿಗೆ ಜಿಟಿ ದೇವೆಗೌಡ ಸ್ಪಷ್ಟನೆ ನೀಡಿದ್ದಾರೆ.

ಈ ಬಾರಿ ನೂರಕ್ಕೆ ನೂರರಷ್ಟು ಪ್ರತಿಶತ ಪ್ರತಾಪ್‌ ಸಿಂಹರಿಗೆ ಟಿಕೆಟ್‌ ಸಿಗಲಿದೆ. ತುಳಸಿ ದಾಸಪ್ಪರ ನಂತರ ಮೈಸೂರಿನಿಂದ ಒಕ್ಕಲಿಗರೊಬ್ಬರು ಸಂಸದರಾಗಿದ್ದಾರೆ. ನಾನು ಕಳೆದೆರೆಡು ಚುನಾವಣೆಯಲ್ಲಿ ಪ್ರತಾಪ್‌ರಿಗೆ ಬೆಂಬಲ ಸೂಚಿಸಿದ್ದೆ. ಈ ಬಾರಿಯೂ ಅವರಿಗೆ ನಮ್ಮ ಬೆಂಬಲ ಇರಲಿದೆ.

ಕಳೆದ ಹತ್ತು ವರ್ಷಗಳಲ್ಲಿ ಪ್ರತಾಪ್‌ ಸಿಂಹ ಸಂಸದರಾಗಿ ಹಲವಾರು ಪ್ರಗತಿ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ ಎಂದು ಶಾಸಕ ಜಿ.ಟಿ ದೇವೇಗೌಡ ಪ್ರತಾಪ್‌ ಸಿಂಹ ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಇನ್ನು ಜಿಟಿಡಿ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ವದಂತಿಗಳಿಗೆ ಸಂಬಂಧಿಸಿದಂತೆ ಅಂತಹ ಯಾವುದೇ ಸಂದರ್ಭ ಈವರೆಗೆ ಬಂದಿಲ್ಲ, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸೇರುವುದಿಲ್ಲ. ನಮ್ಮ ಗುರಿ ಕೇವಲ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

andolanait

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

13 mins ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

14 mins ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

34 mins ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

48 mins ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

5 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

6 hours ago