ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಈ ಬಾರಿಯೂ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗಲಿದೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳೀದ್ದಾರೆ.
ಆ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಲಿದೆ ಎಂಬ ಎಲ್ಲಾ ಊಹಾಪೋಹಗಳಿಗೆ ಜಿಟಿ ದೇವೆಗೌಡ ಸ್ಪಷ್ಟನೆ ನೀಡಿದ್ದಾರೆ.
ಈ ಬಾರಿ ನೂರಕ್ಕೆ ನೂರರಷ್ಟು ಪ್ರತಿಶತ ಪ್ರತಾಪ್ ಸಿಂಹರಿಗೆ ಟಿಕೆಟ್ ಸಿಗಲಿದೆ. ತುಳಸಿ ದಾಸಪ್ಪರ ನಂತರ ಮೈಸೂರಿನಿಂದ ಒಕ್ಕಲಿಗರೊಬ್ಬರು ಸಂಸದರಾಗಿದ್ದಾರೆ. ನಾನು ಕಳೆದೆರೆಡು ಚುನಾವಣೆಯಲ್ಲಿ ಪ್ರತಾಪ್ರಿಗೆ ಬೆಂಬಲ ಸೂಚಿಸಿದ್ದೆ. ಈ ಬಾರಿಯೂ ಅವರಿಗೆ ನಮ್ಮ ಬೆಂಬಲ ಇರಲಿದೆ.
ಕಳೆದ ಹತ್ತು ವರ್ಷಗಳಲ್ಲಿ ಪ್ರತಾಪ್ ಸಿಂಹ ಸಂಸದರಾಗಿ ಹಲವಾರು ಪ್ರಗತಿ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಶಾಸಕ ಜಿ.ಟಿ ದೇವೇಗೌಡ ಪ್ರತಾಪ್ ಸಿಂಹ ಪರ ಬ್ಯಾಟಿಂಗ್ ಮಾಡಿದ್ದಾರೆ.
ಇನ್ನು ಜಿಟಿಡಿ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳಿಗೆ ಸಂಬಂಧಿಸಿದಂತೆ ಅಂತಹ ಯಾವುದೇ ಸಂದರ್ಭ ಈವರೆಗೆ ಬಂದಿಲ್ಲ, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ. ನಮ್ಮ ಗುರಿ ಕೇವಲ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…