ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡ ಬಹಿರಂಗ ಸವಾಲೊಂದನ್ನು ಹಾಕಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ಏನು ಕಡಿದು ಕಟ್ಟಿ ಹಾಕಿದ್ದಾರೆ? ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಮಾದ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಜಿ.ಟಿ ದೇವೇಗೌಡ, ನೀವು ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡುತ್ತೇನೆ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಗೆ ಕಣಕ್ಕಿಳಿಯೋಣ. ಯಾರು ಗೆಲ್ಲುತ್ತಾರೆ ನೋಡೋಣ ಬನ್ನಿ ಎಂದು ಸವಾಲು ಹಾಕಿದರು.
ಅಭಿವೃದ್ಧಿ ಅಂದ್ರೆ ಏನು ಎಂಬುದೇ ಸಿದ್ದರಾಮಯ್ಯಗೆ ಗೊತ್ತಿಲ್ಲ. ಅಭಿವೃದ್ಧಿ ಮಾಡದೇ ರಾಜಕೀಯದಲ್ಲಿ ಬೆಳದಿದ್ದಾರೆ ಎಂದರೆ ಅದು ಸಿದ್ದರಾಮಯ್ಯ ಮಾತ್ರ ಎಂದು ಟೀಕಿಸಿದರು.
ಎಷ್ಟು ದಿನ ಮುಖ್ಯಮಂತ್ರಿ ಆಗಿರ್ತಿರಿ, ಎಷ್ಟು ದಿನ ಅಧಿಕಾರದಲ್ಲಿ ಇರುತ್ತೀರಾ ನೋಡೋಣ. ನಮಗೆ ನೋವು ಕೊಡುತ್ತಲೇ ಇದ್ದೀರಿ. ಪದೇ ಪದೇ ಬಂದು ಯಾಕೆ ಈ ರೀತಿ ಚುಚ್ಚು ಮಾತುಗಳನ್ನು ಆಡುತ್ತೀರಿ? ಮೌನವಾಗಿ ಮರ್ಯಾದೆಯಿಂದ ಇರಿ. 35 ಸಾವಿರ ಮತಗಳ ಅಂತರದಿಂದ ನಿಮ್ಮನ್ನು ಸೋಲಿಸಿದ್ದಾಗಲೂ ನಿಮ್ಮ ಬಗ್ಗೆ ನಾನು ಅಗೌರವದಿಂದ ಮಾತಾಡಿಲ್ಲ ಎಂದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿನ, ತಹಶೀಲ್ದಾರ್, ಬಿಇಒ ಮೊದಲಾದವರೆಲ್ಲರೂ ಮುಖ್ಯಮಂತ್ರಿ ಬಂಧುಗಳೇ. ಹೆಸರಿಗೆ ನಾನು ಅಲ್ಲಿ ಶಾಸಕ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಲ್ಲಾ ನಿಮ್ಮದೇ. ಗುತ್ತಿಗೆದಾರರು ಕಮೀಷನ್ ಅನ್ನು ನಿಮ್ಮ ಪುತ್ರನಿಗೆ ಕೊಡಬೇಕು. ಯತೀಂದ್ರ ಸಿದ್ದರಾಮಯ್ಯ ನಮ್ಮ ಕ್ಷೇತ್ರದಲ್ಲಿ ಕಮೀಷನ್ ಪಡೆಯುತ್ತಿದ್ದಾರೆ. ನಿಮ್ಮದು 60% ಕಮಿಷನ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…