ಮೈಸೂರು

ಪಾಲಿಕೆ ನೌಕರರ ಮುಷ್ಕರಕ್ಕೆ ಜಿಟಿಡಿ ಬೆಂಬಲ

ಮೈಸೂರು : ನಗರಪಾಲಿಕೆ ಅಧಿಕಾರಿಗಳ, ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು. ನಿತ್ಯ ಕೆಲಸ ಮಾಡುವ ಪಾಲಿಕೆ ಸಿಬ್ಬಂದಿ ಹಿತವನ್ನು ಕಾಪಾಡಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ಒತ್ತಾಯಿಸಿದರು.

ನಗರಪಾಲಿಕೆ ಕಚೇರಿ ಎದುರು ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವದಿ ಮುಷ್ಕರದಲ್ಲಿ ಪಾಲ್ಗೊಂಡು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ಪಾಲಿಕೆ ನೌಕರರ ಹಕ್ಕುಗಳನ್ನು ಈಡೇರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ಯಾವುದೇ ವಿಚಾರಗಳಿದ್ದರೂ ಮುಕ್ತವಾಗಿ ಮಾತುಕತೆ ನಡೆಸಿ ಸರ್ಕಾರ ತಕ್ಷಣವೇ ಸ್ಪಂದಿಸಬೇಕು. ನೌಕರರು ಬೀದಿಗಿಳಿದು ಹೋರಾಟ ಮಾಡಲು ಅವಕಾಶ ಕೊಡದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಮೈಸೂರು ಸೇರಿದಂತೆ ರಾಜ್ಯದ ಹತ್ತು ಮಹಾ ನಗರಪಾಲಿಕೆಗಳ ನೌಕರ ವರ್ಗದವರು ಅವರ ಏಳು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ನೌಕರರ ತಾರತಮ್ಯ, ಸಮಸ್ಯೆಗಳನ್ನು ಪರಿಹರಿಸಬೇಕು. ನೌಕರರು, ಅಧಿಕಾರಿ ವರ್ಗದವರೊಂದಿಗೆ ಚರ್ಚಿಸಿ ಒಪ್ಪಿಗೆ ಕೊಡಬೇಕು ಎಂದು ಮನವಿ ಮಾಡಿದರು.

ಪಾಲಿಕೆ ಅಧಿಕಾರಿಗಳು, ನೌಕರರು ನಗರದ ಸ್ವಚ್ಛತೆ, ನೈರ್ಮಲ್ಯ, ಪರಿಸರ, ಆರೋಗ್ಯ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಸಿದ್ದರಾಮಯ್ಯ ಅವರು ಪೌರಕಾರ್ಮಿಕರ ನೇಮಕಾತಿ ಕಾಯಂ ಮಾಡಿ ದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಯುಜಿಡಿಯಲ್ಲಿ ಬಚ್ಚಲಿನೊಳಗೆ ನಿಂತು ಕೆಲಸ ಮಾಡುವ ನೌಕರರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಪೌರಕಾರ್ಮಿಕರೊಂದಿಗೆ ಕೆಲಸ ಮಾಡುವ ಯುಜಿಡಿ ಕಾರ್ಮಿಕರನ್ನು ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

1 hour ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

2 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

2 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

7 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

7 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

7 hours ago