ಮೈಸೂರು

ಪಾಲಿಕೆ ನೌಕರರ ಮುಷ್ಕರಕ್ಕೆ ಜಿಟಿಡಿ ಬೆಂಬಲ

ಮೈಸೂರು : ನಗರಪಾಲಿಕೆ ಅಧಿಕಾರಿಗಳ, ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು. ನಿತ್ಯ ಕೆಲಸ ಮಾಡುವ ಪಾಲಿಕೆ ಸಿಬ್ಬಂದಿ ಹಿತವನ್ನು ಕಾಪಾಡಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ಒತ್ತಾಯಿಸಿದರು.

ನಗರಪಾಲಿಕೆ ಕಚೇರಿ ಎದುರು ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವದಿ ಮುಷ್ಕರದಲ್ಲಿ ಪಾಲ್ಗೊಂಡು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ಪಾಲಿಕೆ ನೌಕರರ ಹಕ್ಕುಗಳನ್ನು ಈಡೇರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ಯಾವುದೇ ವಿಚಾರಗಳಿದ್ದರೂ ಮುಕ್ತವಾಗಿ ಮಾತುಕತೆ ನಡೆಸಿ ಸರ್ಕಾರ ತಕ್ಷಣವೇ ಸ್ಪಂದಿಸಬೇಕು. ನೌಕರರು ಬೀದಿಗಿಳಿದು ಹೋರಾಟ ಮಾಡಲು ಅವಕಾಶ ಕೊಡದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಮೈಸೂರು ಸೇರಿದಂತೆ ರಾಜ್ಯದ ಹತ್ತು ಮಹಾ ನಗರಪಾಲಿಕೆಗಳ ನೌಕರ ವರ್ಗದವರು ಅವರ ಏಳು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ನೌಕರರ ತಾರತಮ್ಯ, ಸಮಸ್ಯೆಗಳನ್ನು ಪರಿಹರಿಸಬೇಕು. ನೌಕರರು, ಅಧಿಕಾರಿ ವರ್ಗದವರೊಂದಿಗೆ ಚರ್ಚಿಸಿ ಒಪ್ಪಿಗೆ ಕೊಡಬೇಕು ಎಂದು ಮನವಿ ಮಾಡಿದರು.

ಪಾಲಿಕೆ ಅಧಿಕಾರಿಗಳು, ನೌಕರರು ನಗರದ ಸ್ವಚ್ಛತೆ, ನೈರ್ಮಲ್ಯ, ಪರಿಸರ, ಆರೋಗ್ಯ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಸಿದ್ದರಾಮಯ್ಯ ಅವರು ಪೌರಕಾರ್ಮಿಕರ ನೇಮಕಾತಿ ಕಾಯಂ ಮಾಡಿ ದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಯುಜಿಡಿಯಲ್ಲಿ ಬಚ್ಚಲಿನೊಳಗೆ ನಿಂತು ಕೆಲಸ ಮಾಡುವ ನೌಕರರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಪೌರಕಾರ್ಮಿಕರೊಂದಿಗೆ ಕೆಲಸ ಮಾಡುವ ಯುಜಿಡಿ ಕಾರ್ಮಿಕರನ್ನು ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago