ಮೈಸೂರು

ಪಾಲಿಕೆ ನೌಕರರ ಮುಷ್ಕರಕ್ಕೆ ಜಿಟಿಡಿ ಬೆಂಬಲ

ಮೈಸೂರು : ನಗರಪಾಲಿಕೆ ಅಧಿಕಾರಿಗಳ, ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು. ನಿತ್ಯ ಕೆಲಸ ಮಾಡುವ ಪಾಲಿಕೆ ಸಿಬ್ಬಂದಿ ಹಿತವನ್ನು ಕಾಪಾಡಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ಒತ್ತಾಯಿಸಿದರು.

ನಗರಪಾಲಿಕೆ ಕಚೇರಿ ಎದುರು ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವದಿ ಮುಷ್ಕರದಲ್ಲಿ ಪಾಲ್ಗೊಂಡು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ಪಾಲಿಕೆ ನೌಕರರ ಹಕ್ಕುಗಳನ್ನು ಈಡೇರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ಯಾವುದೇ ವಿಚಾರಗಳಿದ್ದರೂ ಮುಕ್ತವಾಗಿ ಮಾತುಕತೆ ನಡೆಸಿ ಸರ್ಕಾರ ತಕ್ಷಣವೇ ಸ್ಪಂದಿಸಬೇಕು. ನೌಕರರು ಬೀದಿಗಿಳಿದು ಹೋರಾಟ ಮಾಡಲು ಅವಕಾಶ ಕೊಡದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಮೈಸೂರು ಸೇರಿದಂತೆ ರಾಜ್ಯದ ಹತ್ತು ಮಹಾ ನಗರಪಾಲಿಕೆಗಳ ನೌಕರ ವರ್ಗದವರು ಅವರ ಏಳು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ನೌಕರರ ತಾರತಮ್ಯ, ಸಮಸ್ಯೆಗಳನ್ನು ಪರಿಹರಿಸಬೇಕು. ನೌಕರರು, ಅಧಿಕಾರಿ ವರ್ಗದವರೊಂದಿಗೆ ಚರ್ಚಿಸಿ ಒಪ್ಪಿಗೆ ಕೊಡಬೇಕು ಎಂದು ಮನವಿ ಮಾಡಿದರು.

ಪಾಲಿಕೆ ಅಧಿಕಾರಿಗಳು, ನೌಕರರು ನಗರದ ಸ್ವಚ್ಛತೆ, ನೈರ್ಮಲ್ಯ, ಪರಿಸರ, ಆರೋಗ್ಯ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಸಿದ್ದರಾಮಯ್ಯ ಅವರು ಪೌರಕಾರ್ಮಿಕರ ನೇಮಕಾತಿ ಕಾಯಂ ಮಾಡಿ ದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಯುಜಿಡಿಯಲ್ಲಿ ಬಚ್ಚಲಿನೊಳಗೆ ನಿಂತು ಕೆಲಸ ಮಾಡುವ ನೌಕರರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಪೌರಕಾರ್ಮಿಕರೊಂದಿಗೆ ಕೆಲಸ ಮಾಡುವ ಯುಜಿಡಿ ಕಾರ್ಮಿಕರನ್ನು ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

5 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

6 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

6 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

6 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

6 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

6 hours ago